ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ 
ದೇಶ

ಐಐಟಿ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭ

ಐಐಟಿ ಶುಲ್ಕದಲ್ಲಿ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ತೊಂದರೆಯಾಗುವುದನ್ನು...

ನವದೆಹಲಿ: ಐಐಟಿ ಶುಲ್ಕದಲ್ಲಿ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಬಹುದೊಡ್ಡ ನಿರಾಳತೆ ನೀಡಿರುವ ಕೇಂದ್ರ ಸರ್ಕಾರ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಡ್ಡಿರಹಿತ ಸಾಲ ನೀಡಲು ಮುಂದಾಗಿದೆ. ಈ ಕುರಿತ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಿನ್ನೆ ಅನುಮೋದನೆ ನೀಡಿದೆ. 
ಐಐಟಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಟುಂಬದವರ ವಾರ್ಷಿಕ ಆದಾಯ 9 ಲಕ್ಷಕ್ಕಿಂತ ಕೆಳಗಿದ್ದರೆ ಸರ್ಕಾರದ ವಿನಾಯಿತಿ ಸಿಗುತ್ತದೆ.
ಐಐಟಿ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಯಾವುದೇ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಶುಲ್ಕ ಹೆಚ್ಚಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸೌಲಭ್ಯ ಪದವಿ ಮತ್ತು ಐದು ವರ್ಷಗಳ ಆಂತರಿಕ ಪದವಿ ಕೋರ್ಸ್ ಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಸಾಲದ ಮೇಲಿನ ಬಡ್ಡಿ ವಿನಾಯ್ತಿ ಐದು ವರ್ಷಗಳವರೆಗೆ ವಿದ್ಯಾರ್ಥಿಗಳಿಗೆ ಸಿಗುತ್ತದೆ. ಶೈಕ್ಷಣಿಕ ಸಾಲ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಮಾತ್ರ ಒಳಗೊಳ್ಳುತ್ತದೆ. ಮಾನವ ಸಂಪನ್ಮೂಲ ಇಲಾಖೆಯ ಈ ಪ್ರಸ್ತಾವನೆಗೆ ಹಣಕಾಸು ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಅಧಿಕಾರಿ ವಿವರಿಸಿದ್ದಾರೆ. 
ಹಿಂದಿನ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರ ಅಧಿಕಾರಾವಧಿಯಲ್ಲಿ ಐಐಟಿ ಶುಲ್ಕವನ್ನು 90 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. 
ಆದರೆ ಎಸ್ ಸಿ/ ಎಸ್ ಟಿ, ವಿಕಲಾಂಗರು, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶುಲ್ಕದಲ್ಲಿ ವಿನಾಯ್ತಿ ಇದೆ. ಸಾಮಾನ್ಯ ವರ್ಗದ ಬಡ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಹೊಸ ಸೌಲಭ್ಯ ನೆರವಿಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT