ಆರೋಪಿ ರಾಮ್ ಕುಮಾರ್ 
ದೇಶ

ನಾನು ಬೆದರಿಕೆ ಹಾಕಲು ಅಂದು ರೈಲ್ವೆ ಸ್ಟೇಷನ್ ಗೆ ಹೋಗಿದ್ದೆ: ರಾಮ್ ಕುಮಾರ್

ಇನ್ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಜೂನ್ 24 ರಂದು ನನಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ, ..

ಚೆನ್ನೈ: ಇನ್ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಜೂನ್ 24 ರಂದು ನನಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ, ಬೆದರಿಕೆ ಹಾಕಲು ಹೋಗಿದ್ದೆ, ಆದರೆ ಎಲ್ಲರ ಮುಂದೆ ನನಗೆ ಅವಮಾನ ಮಾಡಿದಳು, ಇದರಿಂದ ಸಿಟ್ಟಿಗೆದ್ದು ಕೊಲೆ ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರಿಗೆ ಹೇಳಿದ್ದಾನೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಯಾಧೀಶರು ಆರೋಪಿ ರಾಮ್ ಕುಮಾರ್ ನನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಮೊದಲ ದಿನದ ವಿಚಾರಣೆ ವೇಳೆ ಆರೋಪಿ ರಾಮ್ ಕುಮಾರ್ ಈ ವಿಚಾರ ಬಾಯಿಬಿಟ್ಟಿದ್ದಾನೆ.

ಮೊದಲ ಬಾರಿ ಸ್ವಾತಿಯನ್ನು ಚೂಲೈಮಡು ರಸ್ತೆಯಲ್ಲಿ ನೋಡಿದ್ದೆ, ಆಕೆ ರಸ್ತೆ ದಾಟುವಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋದೆ. ಜೊತೆಗೆ ಪರಿಚಯ ಮಾಡಿಕೊಂಡೆ. ಬಿಇ ಮಾಡಿರುವ ತನಗೆ ನೌಕರಿ ಅವಕಾಶಗಳು ಇದ್ದರೆ ತಿಳಿಸುವಂತೆ ಆಕೆಗೆ ಹೇಳಿದ್ದೆ ಎಂದು ಆರೋಪಿ ರಾಮ್ ಕುಮಾರ್ ಪೊಲೀಸರಿಗೆ ತಿಳಿಸಿದ್ದಾನೆ.

ಆರಂಭಿಕ ಪರಿಚಯದ ನಂತರ ನಾನು ಆಕೆಯ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದೆ. ಆದರೆ ಕೋಪಗೊಂಡ ಆಕೆ ಎಲ್ಲರ ಮುಂದೆ ನನ್ನನ್ನು ಅವಮಾನ ಮಾಡಿದಳು. ಜೂನ್ 24 ರಂದು ಸ್ವಾತಿಯನ್ನು ಹೆದರಿಸಲು ನಾನು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದೆ. ಆದರೆ ಕೋಪೊದ್ರಿಕ್ತನಾಗಿ ತನ್ನ ಬ್ಯಾಗಿ ನಲ್ಲಿದ್ದ ಕುಡುಗೋಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆರೋಪಿ ನೀಡುವ ಹೇಳಿಕೆಯನ್ನು ನ್ಯಾಯಾಲಯ ಹೆಚ್ಚಾಗಿ ಪರಿಗಣಿಸುವುದಿಲ್ಲ. ಆದರೆ ಆರೋಪಿ ಹೇಳಿಕೆಗೂ ಸೂಕ್ತ ಸಾಕ್ಷ್ಯಾಧಾರಗಳಿಗೂ ಹೊಂದಾಣಿಕೆಯಾದರೇ ಮಾತ್ರ ಆರೋಪಿ ಹೇಳಿಕೆಗೆ ಮಾನ್ಯತೆ ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT