ಓಮರ್ ಅಬ್ದುಲ್ಲಾ 
ದೇಶ

ಕಾಶ್ಮೀರ ಗಲಭೆ: ನನ್ನ ಸರ್ಕಾರ ಮಾಡಿದ ತಪ್ಪನ್ನೇ ಮುಫ್ತಿ ಸರ್ಕಾರವೂ ಮುಂದುವರೆಸುತ್ತಿದೆ: ಒಮರ್ ಅಬ್ದುಲ್ಲಾ

ಬೀದಿಗಿಳಿದು ಪ್ರತಿಭಟನೆ ಮಾಡುವವರನ್ನು ನಿಯಂತ್ರಿಸುವ ವಿಷಯದಲ್ಲಿ ತಮ್ಮ ಸರ್ಕಾರ ಮಾಡಿದ್ದ ತಪ್ಪುಗಳನ್ನೇ ಮೆಹಬೂಬಾ ಮುಫ್ತಿ ಸರ್ಕಾರ ಮುಂದುವರೆಸಿದೆ...

ಶ್ರೀನಗರ: ಬೀದಿಗಿಳಿದು ಪ್ರತಿಭಟನೆ ಮಾಡುವವರನ್ನು ನಿಯಂತ್ರಿಸುವ ವಿಷಯದಲ್ಲಿ ತಮ್ಮ ಸರ್ಕಾರ ಮಾಡಿದ್ದ ತಪ್ಪುಗಳನ್ನೇ ಮೆಹಬೂಬಾ ಮುಫ್ತಿ ಸರ್ಕಾರ ಮುಂದುವರೆಸಿದ್ದು, ತಮ್ಮ ಸರ್ಕಾರಕ್ಕಿಂತಲೂ ಹೆಚ್ಚು ತಪ್ಪು ಮಾಡುತ್ತಿದೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.     

ರಸ್ತೆಗಿಳಿದು ಪ್ರತಿಭಟನೆ ನಡೆಸುವವರ ವಿಷಯದಲ್ಲಿ 2010 ರಲ್ಲಿ ತಮ್ಮ ಸರ್ಕಾರ ಮಾಡಿದ್ದಕ್ಕಿಂತ ದೊಡ್ಡ ತಪ್ಪನ್ನು ಈಗಿನ ಮೆಹಬೂಬಾ ಮುಫ್ತಿ ಸರ್ಕಾರ ಮಾಡುತ್ತಿದೆ.  ತಪ್ಪನ್ನು ಅರ್ಥ ಮಾಡಿಕೊಂಡು ನಾನು  ಮುಂದೆಂದೂ ತಪ್ಪನ್ನು ಪುನರಾವರ್ತನೆ ಮಾಡಲಿಲ್ಲ. ಆದರೆ ಸಿಎಂ ಮೆಹಬೂಬಾ ಮುಫ್ತಿ ಸರ್ಕಾರ ಮಾತ್ರ ನಮ್ಮ ಸರ್ಕಾರ ಮಾಡಿದ ತಪ್ಪನ್ನೇ ಮಾಡುತ್ತಿದೆ ಎಂದು ಓಮರ್ ಅಬ್ದುಲ್ಲಾ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  2008-2010 ರಲ್ಲಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳಿಂದ ರಾಜ್ಯ ಸರ್ಕಾರ ನಡೆಸುತ್ತಿರುವ ಪಿಡಿಪಿ-ಬಿಜೆಪಿ ಪಕ್ಷಗಳು ಯಾವುದೇ ಪಾಠವನ್ನು ಕಲಿತಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ವಾನಿ ಹತ್ಯೆಯ ನಂತರದ ಪರಿಣಾಮದ ಬಗ್ಗೆ ರಾಜ್ಯ ಸರ್ಕಾರ ಯೋಚಿಸಿರಲಿಲ್ಲ, ಅಥವಾ ವಾನಿ ಹತ್ಯೆಗೆ ಸೂಕ್ತ ತಯಾರಿ ನಡೆಸಿರಲಿಲ್ಲವೆಂದು ತೋರುತ್ತದೆ ಎಂದು ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT