ಪೆಮಾ ಖಂಡು 
ದೇಶ

ಅರುಣಾಚಲ ರಾಜ್ಯಪಾಲರ ಭೇಟಿ ಮಾಡಿದ ಖಂಡು, ಸರ್ಕಾರ ರಚನೆಯ ಹಕ್ಕು ಮಂಡನೆ

ನಾಟಕೀಯ ಬೆಳವಣಗೆಯಲ್ಲಿ ಅರುಣಾಚಲ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪೆಮಾ ಖಂಡು ಅವರು ಶನಿವಾರ ಪ್ರಭಾರ...

ಇಟಾನಗರ: ನಾಟಕೀಯ ಬೆಳವಣಗೆಯಲ್ಲಿ ಅರುಣಾಚಲ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪೆಮಾ ಖಂಡು ಅವರು ಶನಿವಾರ  ಪ್ರಭಾರ ರಾಜ್ಯಪಾಲ ತಥಾಗತ ರಾಯ್‌ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡು, ನಾನು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದೇನೆ. ಆದರೆ ಪ್ರಮಾಣವಚನ ಸ್ವೀಕರಿಸುವ ದಿನಾಂಗ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
ಪೆಮಾ ಖಂಡು ಅವರು 44 ಬೆಂಬಲ ಶಾಸಕರೊಂದಿಗೆ ರಾಜಭವನಕ್ಕೆ ಆಗಮಿಸಿದ್ದರು.
ಈ ಮಧ್ಯೆ ನಬಂ ತುಕಿ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಶತಾಯಗತಾಯ ಬಹುಮತ ಸಾಬೀತುಪಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಅತಿ ಹೆಚ್ಚು ಶಾಸಕರ ಬೆಂಬಲ ಹೊಂದಿರುವ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ವಿಶ್ವಾಸಮತ ಸಾಬೀತುಪಡಿಸಿದರೆ, ಅರುಣಾಚಲದ ನೂತನ ಸಿಎಂ ಆಗಿ ಖಂಡು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
60 ಸದಸ್ಯ ಬಲದ ಅರುಣಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್‌-15,ಪದಚ್ಯುತ ಸಿಎಂ ಕಲಿಖೋ ಪುಲ್‌ ಅವರ ಪಿಪಿಎ-30, ಬಿಜೆಪಿ-11, ಇಬ್ಬರು ಪಕ್ಷೇತರರನ್ನು ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT