ಕಳ್ಳಬಟ್ಟಿ ಸೇವನೆ 
ದೇಶ

ಉತ್ತರಪ್ರದೇಶ: ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆ

ಉತ್ತರಪ್ರದೇಶದ ಅಲಿಗಂಜ್ ನಲ್ಲಿ ನಿನ್ನೆ ಕಳ್ಳಬಟ್ಟಿ ಸೇವಿಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು...

ಅಲಿಗಂಜ್: ಉತ್ತರಪ್ರದೇಶದ ಅಲಿಗಂಜ್ ನಲ್ಲಿ ನಿನ್ನೆ ಕಳ್ಳಬಟ್ಟಿ ಸೇವಿಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳ ಸೇವಿಸಿದ್ದರಿಂದ ನಿನ್ನೆ 17 ಮಂದಿ ಮೃತಪಟ್ಟಿದ್ದರು. ಇನ್ನು ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರು ಇಂದು ಮೃತಪಟ್ಟಿದ್ದು, ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನು ಪ್ರಕರಣದ ಮುಖ್ಯ ಆರೋಪಿ ಶ್ರೀಪಾಲ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಸರ್ಜನ್ ಸಿಂಗ್ ಹೇಳಿದ್ದಾರೆ. 
ಲುವಾರಿ ದರ್ವಾಜ್ ಹಾಗೂ ಲಾವ್ ಖೇರ್ ಹಳ್ಳಿಯ ಜನತೆ ಹೆಚ್ಚಾಗಿ ಕಳ್ಳಬಟ್ಟಿ ಸೇವಿಸಿದ್ದಾರೆ. ಇನ್ನು ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾಧಿಕಾರಿ ಅಜಯ್ ಯಾದವ್ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸರ್ಕಾರಿ ಅಧಿಕಾರಿಗಳು ಹಾಗೂ ಮೂವರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಡಿಐಜಿ ಗೋವಿಂದ ಅಗರ್ವಾಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT