ಕಳ್ಳಬಟ್ಟಿ ಸೇವನೆ 
ದೇಶ

ಉತ್ತರಪ್ರದೇಶ: ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆ

ಉತ್ತರಪ್ರದೇಶದ ಅಲಿಗಂಜ್ ನಲ್ಲಿ ನಿನ್ನೆ ಕಳ್ಳಬಟ್ಟಿ ಸೇವಿಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು...

ಅಲಿಗಂಜ್: ಉತ್ತರಪ್ರದೇಶದ ಅಲಿಗಂಜ್ ನಲ್ಲಿ ನಿನ್ನೆ ಕಳ್ಳಬಟ್ಟಿ ಸೇವಿಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳ ಸೇವಿಸಿದ್ದರಿಂದ ನಿನ್ನೆ 17 ಮಂದಿ ಮೃತಪಟ್ಟಿದ್ದರು. ಇನ್ನು ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರು ಇಂದು ಮೃತಪಟ್ಟಿದ್ದು, ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನು ಪ್ರಕರಣದ ಮುಖ್ಯ ಆರೋಪಿ ಶ್ರೀಪಾಲ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಸರ್ಜನ್ ಸಿಂಗ್ ಹೇಳಿದ್ದಾರೆ. 
ಲುವಾರಿ ದರ್ವಾಜ್ ಹಾಗೂ ಲಾವ್ ಖೇರ್ ಹಳ್ಳಿಯ ಜನತೆ ಹೆಚ್ಚಾಗಿ ಕಳ್ಳಬಟ್ಟಿ ಸೇವಿಸಿದ್ದಾರೆ. ಇನ್ನು ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾಧಿಕಾರಿ ಅಜಯ್ ಯಾದವ್ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸರ್ಕಾರಿ ಅಧಿಕಾರಿಗಳು ಹಾಗೂ ಮೂವರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಡಿಐಜಿ ಗೋವಿಂದ ಅಗರ್ವಾಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT