ದಾವೂದ್- ಏಕನಾಥ್ ಖಾಡ್ಸೆ 
ದೇಶ

ಖಾಡ್ಸೆ - ದಾವೂದ್ ನಡುವೆ ಫೋನ್ ಸಂಭಾಷಣೆ ನಡೆದಿಲ್ಲ: ಹೈಕೋರ್ಟ್ ಗೆ ಎಟಿಎಸ್

ಮಹಾರಾಷ್ಟ್ರ ಮಾಜಿ ಸಚಿವ ಏಕನಾಥ್ ಖಾಡ್ಸೆ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ನಡುವೆ ಯಾವುದೇ ಫೋನ್...

ಮುಂಬೈ: ಮಹಾರಾಷ್ಟ್ರ ಮಾಜಿ ಸಚಿವ ಏಕನಾಥ್ ಖಾಡ್ಸೆ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ನಡುವೆ ಯಾವುದೇ ಫೋನ್ ಸಂಭಾಷಣೆ ನಡೆದಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮಹಾರಾಷ್ಟ್ರ ಉಗ್ರ ನಿಗ್ರಹ ದಳ(ಎಟಿಎಸ್) ಸೋಮವಾರ ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ದಾವೂದ್ ಇಬ್ರಾಹಿಂ ಪಾಕ್ ನಿಂದ ಮಹಾರಾಷ್ಟ್ರದ ಬಿಜೆಪಿ ಮುಖಂಡ, ಮಾಜಿ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರ ಮೊಬೈಲ್ ಗೆ ಅತೀ ಹೆಚ್ಚು ಬಾರಿ ಕರೆ ಮಾಡಿದ್ದಾರೆ ಎಂದು ವಡೋದರಾ ಮೂಲದ ಹ್ಯಾಕರ್ ಮನೀಶ್ ಭಂಗಲೆ ಅವರು ಆರೋಪಿಸಿದ್ದರು.
ಹ್ಯಾಕರ್ ಆರೋಪದ ಬಗ್ಗೆ ಎಟಿಎಸ್ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ಉಗ್ರರ ನಂಟಿನ ಬಗ್ಗೆ ಮತ್ತು ಖಾಡ್ಸೆ ಹಾಗೂ ದಾವೂದ್ ನಡುವೆ ದೂರವಾಣಿ ಕರೆ ವಿನಿಮಯವಾದ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಪತ್ತೆಯಾಗಿಲ್ಲ ಎಂದು ಎಟಿಎಸ್ ವಕೀಲ ನಿತೀನ್ ಪ್ರಧಾನ್ ಅವರು ನ್ಯಾಯಮೂರ್ತಿ ಎನ್.ಎಚ್. ಪಾಟೀಲ್ ಮತ್ತು ಪಿ.ಡಿ.ನಾಯಕ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಭಂಗಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಎಟಿಎಸ್ ಈ ಮಾಹಿತಿ ನೀಡಿದೆ.
ದಾವೂದ್ ಇಬ್ರಾಹಿಂನೊಂದಿಗೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಏಕನಾಥ್ ಖಾಡ್ಸೆ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT