ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಸಿಆರ್'ಪಿಎಫ್ ಯೋಧರ ಹತ್ಯೆ: ಬಿಹಾರ ಸರ್ಕಾರಕ್ಕೆ ರಾಜನಾಥ್ ಸಿಂಗ್ ನೆರವಿನ ಭರವಸೆ

ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಕ್ಸಲರ ಹುಟ್ಟಡಗಿಸಲು ಬಿಹಾರ ಸರ್ಕಾರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ಅವರು...

ನವದೆಹಲಿ: ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಕ್ಸಲರ ಹುಟ್ಟಡಗಿಸಲು ಬಿಹಾರ ಸರ್ಕಾರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ.

ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು 10 ಸಿಆರ್ ಪಿಎಫ್ ಕಮಾಂಡೋಗಳು ಹುತಾತ್ಮರಾಗಿದ್ದರು. ಅಲ್ಲದೆ, ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದೊಂದಿಗೆ ದೂರವಾಣಿ ಮುಖಾಂತರ ಮಾತುಕತೆ ನಡೆಸಿರುವ ರಾಜನಾಥ್ ಸಿಂಗ್ ಅವರು, ವರದಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ, ನಕ್ಸಲರ ಹುಟ್ಟಡಗಿಸಲು ಬಿಹಾರ ಸರ್ಕಾರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯವನ್ನು ಮಾಡಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಮಾತುಕತೆ ವೇಳೆ ನಿತೀಶ್ ಕುಮಾರ್ ಅವರು ಕೂಡ ಗೃಹ ಸಚಿವರಿಗೆ ಪರಿಸ್ಥಿತಿಯ ಕುರಿತಂತೆ ವಿವರಣೆ ನೀಡಿದ್ದು, ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ವಿವರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಇದೇ ವೇಳೆ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿರುವ ರಾಜನಾಥ ಸಿಂಗ್ ಅವರು, ಗಾಯಗೊಂಡಿರುವ ಯೋಧರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಇದರಂತೆ ಗಯಾ-ಔರಂಗಾಬಾದ್ ಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ಸಿಆರ್ ಪಿಎಫ್ ಡೈರೆಕ್ಟರ್ ಜನರಲ್ ಕೆ.ದುರ್ಗಾ ಪ್ರಸಾದ್ ಅವರಿಗೆ ರಾಜನಾಥ್ ಸಿಂಗ್ ಅವರು ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT