ಡಾ.ಎ.ಪಿ.ಜೆ.ಅಬ್ದುಲ್ ಕಲಾಂ(ಸಂಗ್ರಹ ಚಿತ್ರ) 
ದೇಶ

ಅಬ್ದುಲ್ ಕಲಾಂ ಅವರ ಸಮಾಧಿ ಸ್ಥಳದಲ್ಲಿ ಸ್ಮಾರಕಕ್ಕೆ ಶಂಕು ಸ್ಥಾಪನೆ: ಪರ್ರಿಕರ್

ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಗೌರವಾರ್ಥ ಸ್ಮಾರಕಕ್ಕೆ ಶಂಕುಸ್ಥಾಪನೆ ಇದೇ...

ನವದೆಹಲಿ: ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಗೌರವಾರ್ಥ ಸ್ಮಾರಕಕ್ಕೆ ಶಂಕುಸ್ಥಾಪನೆ ಇದೇ 27ರಂದು ಅವರ ಸಮಾಧಿ ಸ್ಥಳ ತಮಿಳು ನಾಡಿನ ರಾಮೇಶ್ವರದಲ್ಲಿ ನೆರವೇರಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಉತ್ತರಿಸಿದ ಅವರು, ಸ್ಮಾರಕ ನಿರ್ಮಾಣಕ್ಕೆ 5 ಎಕರೆ ಜಾಗ ಬೇಕಾಗಿದ್ದು, 1.8 ಎಕರೆ ಜಾಗ ಮಾತ್ರ ಸಿಕ್ಕಿದೆಯಷ್ಟೆ ಎಂದರು.
ನಮ್ಮ ಯೋಜನೆಗೆ ತಮಿಳುನಾಡು ಸರ್ಕಾರ ಸಹಕಾರ ನೀಡುತ್ತಿದೆ. ಸ್ಮಾರಕದ ವಿನ್ಯಾಸ ಅಂತಿಮಗೊಂಡಿದ್ದು, ಇನ್ನು ಉಳಿದ ಭೂಮಿ ಸಿಗಲು ಕಾಯುತ್ತಿಲ್ಲ. ಈಗಿರುವ ಭೂಮಿಯಲ್ಲಿ ಕೆಲಸ ಮುಂದುವರಿಸುತ್ತೇವೆ ಎಂದರು.
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಕಳೆದ ವರ್ಷ ಜುಲೈ 27ರಂದೇ ನಿಧನರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT