ಬಿಜೆಪಿ ನಾಯಕ - ಮಾಯಾವತಿ 
ದೇಶ

ಬಿಎಸ್ಪಿ ನಾಯಕಿ ಮಾಯಾವತಿಯನ್ನು ವೇಶ್ಯೆಗೆ ಹೋಲಿಸಿದ ಬಿಜೆಪಿ ನಾಯಕ

ಇದೊಂದು ಆಘಾತಕಾರಿ ಹೇಳಿಕೆ ಅಂತ ಹೇಳಬಹುದು. ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಉಪಾಧ್ಯಕ್ಷ ದಯಾಶಂಕರ ಸಿಂಗ್...

ಲಖನೌ: ಇದೊಂದು ಆಘಾತಕಾರಿ ಹೇಳಿಕೆ ಅಂತ ಹೇಳಬಹುದು. ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಉಪಾಧ್ಯಕ್ಷ ದಯಾಶಂಕರ ಸಿಂಗ್ ಅವರು ಬಿಎಸ್ಪಿ ನಾಯಕಿ ಮಾಯಾವತಿ ಅವರನ್ನು ವೇಶ್ಯೆಗೆ ಹೋಲಿಸಿದ್ದಾರೆ. 
ವರದಿಗಾರರೊಂದಿಗೆ ಮಾತನಾಡಿದ ಸಿಂಗ್, ಒಬ್ಬ ವೇಶ್ಯೆ ಹಣ ನೀಡಿದರೆ ತನ್ನ ಬದ್ಧತೆಯನ್ನು ಈಡೇರಿಸುತ್ತಾಳೆ. ಆದರೆ ಮಾಯಾವತಿ ಹಾಗಲ್ಲ. ಯಾರೂ ಹೆಚ್ಚಿಗೆ ಹಣ ನೀಡುತ್ತಾರೋ ಅವರಿಗೆ ಟಿಕೆಟ್ ನೀಡುತ್ತಾರೆ. ಹೀಗಾಗಿ ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಯಾವತಿ ಅವರು ಟಿಕೆಟ್​ಗಳನ್ನು ಮಾರುತ್ತಿದ್ದಾರೆ… ಅವರು ಎಷ್ಟು ದೊಡ್ಡ ನಾಯಕಿ ಎಂದರೆ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು… ಆದರೆ ಅವರು 1 ಕೋಟಿ ರುಪಾಯಿಗಳನ್ನು ತಮಗೆ ಕೊಡುವ ಯಾರಿಗೆ ಬೇಕಾದರೂ (ಸ್ಪರ್ಧಿಸಲು) ಟಿಕೆಟ್ ಕೊಡುತ್ತಾರೆ. ಯಾರಾದರೂ 2 ಕೋಟಿ ರುಪಾಯಿ ಜೊತೆಗೆ ಬಂದರೆ ಮಾಯಾವತಿ ಅವರಿಗೆ ಟಿಕೆಟ್ ಕೊಡುತ್ತಾರೆ. ಯಾರಾದರೂ 3 ಕೋಟಿ ರುಪಾಯಿ ಕೊಟ್ಟರೆ ಅವರು ಹಿಂದಿನ ಅಭ್ಯರ್ಥಿಗಳಿಗೆ ಕೊಟ್ಟ ಟಿಕೆಟ್ ರದ್ದು ಪಡಿಸಿ ಮೂರನೇವರನ್ನು ಆಯ್ಕೆ ಮಾಡುತ್ತಾರೆ. ಈಗ ಅವರ ವ್ಯಕ್ತಿತ್ವ ವೇಶ್ಯೆಗಿಂತಲೂ ನಿಕೃಷ್ಟವಾಗಿದೆ ಎಂದು ಬಿಜೆಪಿ ನಾಯಕ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಸಿಂಗ್ ಭಾಷಣದ ವಿಡಿಯೋವನ್ನು ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆಪ್​ನ ಅಶುತೋಷ್ ಅವರು, ಬಿಜೆಪಿ ದಲಿತ ವಿರೋಧಿ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷ್ಯ ಬೇಕೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT