ಮೃತದೇಹ ಸಾಗಿಸುತ್ತಿರುವ ಪೊಲೀಸರು 
ದೇಶ

ಪತ್ನಿ, ಪುತ್ರಿ ಆತ್ಮಹತ್ಯೆ ನಂತರ ಐಎಎಸ್ ಅಧಿಕಾರಿ ಬನ್ಸಲ್ ಗೆ ಮಧ್ಯಂತರ ಜಾಮೀನು

ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಬಿ.ಕೆ.ಬನ್ಸಲ್ ಅವರಿಗೆ ಆತ್ಮಹತ್ಯೆಗೆ ಶರಣಾದ ಅವರ ಪತ್ನಿ...

ನವದೆಹಲಿ: ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಬಿ.ಕೆ.ಬನ್ಸಲ್ ಅವರಿಗೆ ಆತ್ಮಹತ್ಯೆಗೆ ಶರಣಾದ ಅವರ ಪತ್ನಿ ಹಾಗೂ ಪುತ್ರಿಯ ಅಂತ್ಯ ಸಂಸ್ಕಾರದಲ್ಲಿ ಭಾವಹಿಸಲು ಸಿಬಿಐ ವಿಶೇಷ ಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬನ್ಸಲ್ ಗೆ ಜುಲೈ 22ರವರೆಗೆ ಜಾಮೀನು ನೀಡಿದ ಸಿಬಿಐ ವಿಶೇಷ ನ್ಯಾಯಾಧೀಶ ಗುರುದೀಪ್ ಸಿಂಗ್ ಅವರು, ಇಂತಹ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಅಗತ್ಯ ಇದೆಯೇ ಎಂಬುದರ ಬಗ್ಗೆ ತನಿಖಾ ಸಂಸ್ಥೆ ಯೋಚಿಸಬೇಕಿದೆ ಎಂದು ಹೇಳಿದ್ದಾರೆ.
'ಇದು ಕೊಲೆಯಂತಹ ಸಾಂಪ್ರದಾಯಿಕ ಅಪರಾಧ ಅಲ್ಲ. ಇಂತಹ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಅಗತ್ಯ ಇರುವುದಿಲ್ಲ. ಏಕೆಂದರೆ ಸಾಕ್ಷ್ಯಾಧಾರಗಳ ಹೆಚ್ಚುಕಮ್ಮಿ ದಾಖಲೆಗಳ ರೂಪದಲ್ಲಿರುತ್ತವೆ' ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ.
ಕಾರ್ಪೋರೇಟ್ ವ್ಯವಹಾರಗಳ ಮಹಾ ನಿರ್ದೇಶಕರಾಗಿದ್ದ ಬನ್ಸಲ್ ಬಂಧನದಿಂದ ನೊಂದ ಪತ್ನಿ ಸತ್ಯಬಾಲ(58) ಹಾಗೂ ಪುತ್ರಿ ನೇಹಾ ಅವರು ನಿನ್ನೆ ದೆಹಲಿಯ ಮಧು ವಿಹಾರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

ಅಷ್ಟೊಂದು ಪ್ರೀತಿ ಇದ್ದರೆ, ನಿಮ್ಮ ಮನೆಗೇಕೆ ಕರೆದೊಯ್ಯಬಾರದು?; ಶ್ವಾನ ಪ್ರಿಯರಿಗೆ ಸುಪ್ರೀಂ ಕೋರ್ಟ್ ಚಾಟಿ

ಇರಾನ್ ಅಶಾಂತಿ: ಭಾರತದ ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ, ಬೆಲೆ ಕುಸಿತ

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

Toxic Teaser: ಯಶ್ ಅಭಿಮಾನಿಗಳು ನಿರಾಳ, ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ': ಸೆನ್ಸಾರ್ ಮಂಡಳಿ

SCROLL FOR NEXT