ಮೃತದೇಹ ಸಾಗಿಸುತ್ತಿರುವ ಪೊಲೀಸರು 
ದೇಶ

ಪತ್ನಿ, ಪುತ್ರಿ ಆತ್ಮಹತ್ಯೆ ನಂತರ ಐಎಎಸ್ ಅಧಿಕಾರಿ ಬನ್ಸಲ್ ಗೆ ಮಧ್ಯಂತರ ಜಾಮೀನು

ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಬಿ.ಕೆ.ಬನ್ಸಲ್ ಅವರಿಗೆ ಆತ್ಮಹತ್ಯೆಗೆ ಶರಣಾದ ಅವರ ಪತ್ನಿ...

ನವದೆಹಲಿ: ಭ್ರಷ್ಟಾಚಾರ ಆರೋಪದ ಮೇಲೆ ಜೈಲು ಪಾಲಾಗಿರುವ ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಬಿ.ಕೆ.ಬನ್ಸಲ್ ಅವರಿಗೆ ಆತ್ಮಹತ್ಯೆಗೆ ಶರಣಾದ ಅವರ ಪತ್ನಿ ಹಾಗೂ ಪುತ್ರಿಯ ಅಂತ್ಯ ಸಂಸ್ಕಾರದಲ್ಲಿ ಭಾವಹಿಸಲು ಸಿಬಿಐ ವಿಶೇಷ ಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬನ್ಸಲ್ ಗೆ ಜುಲೈ 22ರವರೆಗೆ ಜಾಮೀನು ನೀಡಿದ ಸಿಬಿಐ ವಿಶೇಷ ನ್ಯಾಯಾಧೀಶ ಗುರುದೀಪ್ ಸಿಂಗ್ ಅವರು, ಇಂತಹ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಅಗತ್ಯ ಇದೆಯೇ ಎಂಬುದರ ಬಗ್ಗೆ ತನಿಖಾ ಸಂಸ್ಥೆ ಯೋಚಿಸಬೇಕಿದೆ ಎಂದು ಹೇಳಿದ್ದಾರೆ.
'ಇದು ಕೊಲೆಯಂತಹ ಸಾಂಪ್ರದಾಯಿಕ ಅಪರಾಧ ಅಲ್ಲ. ಇಂತಹ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಅಗತ್ಯ ಇರುವುದಿಲ್ಲ. ಏಕೆಂದರೆ ಸಾಕ್ಷ್ಯಾಧಾರಗಳ ಹೆಚ್ಚುಕಮ್ಮಿ ದಾಖಲೆಗಳ ರೂಪದಲ್ಲಿರುತ್ತವೆ' ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ.
ಕಾರ್ಪೋರೇಟ್ ವ್ಯವಹಾರಗಳ ಮಹಾ ನಿರ್ದೇಶಕರಾಗಿದ್ದ ಬನ್ಸಲ್ ಬಂಧನದಿಂದ ನೊಂದ ಪತ್ನಿ ಸತ್ಯಬಾಲ(58) ಹಾಗೂ ಪುತ್ರಿ ನೇಹಾ ಅವರು ನಿನ್ನೆ ದೆಹಲಿಯ ಮಧು ವಿಹಾರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT