ಬಿಎಸ್ಪಿ ನಾಯಕಿ ಜನ್ನತ್ ಜಾಹನ್ 
ದೇಶ

ಬಿಜೆಪಿ ನಾಯಕ ದಯಾಶಂಕರ್ ನಾಲಿಗೆ ಕಟ್ ಮಾಡಿದ್ರೆ 50 ಲಕ್ಷ ಬಹುಮಾನ: ಬಿಎಸ್ಪಿ ನಾಯಕಿ

ಬಿಎಸ್ಪಿ ನಾಯಕಿ ಮಾಯಾವತಿ ಅವರು ವೇಶ್ಯೆಗಿಂತಲೂ ಕಡೆ ಎಂದಿದ್ದ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರ ನಾಲಿಗೆ ಕಟ್ ಮಾಡಿದ್ರೆ 50 ಲಕ್ಷ ರುಪಾಯಿ...

ಚಂಡೀಗಢ: ಬಿಎಸ್ಪಿ ನಾಯಕಿ ಮಾಯಾವತಿ ಅವರು ವೇಶ್ಯೆಗಿಂತಲೂ ಕಡೆ ಎಂದಿದ್ದ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರ ನಾಲಿಗೆ ಕಟ್ ಮಾಡಿದ್ರೆ 50 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಗುರುವಾರ ಬಿಎಸ್ಪಿ ನಾಯಕಿಯೊಬ್ಬರು ಘೋಷಿಸಿದ್ದಾರೆ.
ಮಾಯಾವತಿ ಅವರನ್ನು ವೇಶ್ಯೆಗೆ ಹೋಲಿಸಿದ್ದಕ್ಕೆ ದಯಾಶಂಕರ್ ಅವರನ್ನು ಈಗಾಗಲೇ ಬಿಜೆಪಿ, ಉತ್ತರ ಪ್ರದೇಶ ಉಪಾಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಇತರೆ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಿದೆ.
ಈ ಮಧ್ಯೆ ಚಂಡೀಗಢ ಬಿಎಸ್ಪಿ ಘಟಕದ ಮುಖ್ಯಸ್ಥೆ ಜನ್ನತ್ ಜಾಹನ್ ಅವರು ದಯಾಶಂಕರ್ ನಾಲಿಗೆ ಕಟ್ ಮಾಡಿದರೆ 50 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಮಾಯಾವತಿ ಅವರು ಪಕ್ಷದ ಟಿಕೆಟ್ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದು, ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಟಿಕೆಟ್ ನೀಡುತ್ತಾರೆ. ಅವರು ಒಬ್ಬ ವೇಶ್ಯಗಿಂತಲೂ ಕಡೆ ಎಂದು ದಯಾಶಂಕರ್ ಸಿಂಗ್ ಹೇಳಿದ್ದರು. ಇದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT