ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ 
ದೇಶ

ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಬಾಂಗ್ಲಾ ಒಂಟಿಯಲ್ಲ, ಭಾರತದ ಬೆಂಬಲ ಇದೆ: ಪ್ರಧಾನಿ ಮೋದಿ

ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಬಾಂಗ್ಲಾದೊಂದಿಗೆ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ.

ನವದೆಹಲಿ:ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಬಾಂಗ್ಲಾದೊಂದಿಗೆ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾ ದೇಶದಲ್ಲಿ ರಂಜಾನ್ ದಿನ ನಡೆದ ಉಗ್ರ ದಾಳಿಯನ್ನು ಖಂಡಿಸಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಅಭಿವೃದ್ಧಿ ನೆರೆ ರಾಷ್ಟ್ರಗಳ ಅಭಿವೃದ್ಧಿಗೆ ಸಂಪರ್ಕ ಹೊಂದಿದೆ ಎಂದಿರುವ ಪ್ರಧಾನಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಬಾಂಗ್ಲಾ ದೇಶ ಏಕಾಂಗಿಯಲ್ಲ, ಭಾರತ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ಪೆಟ್ರಾಪೋಲ್-ಬೀನಾಪೋಲ್ ವ್ಯಾಪಾರ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾ ಪ್ರಧಾನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

LPG ಬಿಕ್ಕಟ್ಟು ತೀವ್ರ: ಬೆಂಗಳೂರಿನ ಆಟೋ ಚಾಲಕರ ಬದುಕು ಬೀದಿಗೆ!

IPL 2026: ರನ್ ಕದಿಯಲು ಹೋಗಿ ರನೌಟ್ ಆದ ರಘುವಂಶಿ, ಮೈದಾನದಲ್ಲೇ ಸಿಟ್ಟಾದ ರಿಂಕ್ ಸಿಂಗ್ !Video

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

SCROLL FOR NEXT