ಭೂಪೇಂದರ್ ಸಿಂಗ್ ಠಾಕೂರ್ ಮತ್ತು ರೈತರ ಆತ್ಮಹತ್ಯೆ (ಸಂಗ್ರಹ ಚಿತ್ರ) 
ದೇಶ

ರೈತರ ಸಾವಿಗೆ ದೆವ್ವ-ಭೂತಗಳು ಕಾರಣ: ಮಧ್ಯಪ್ರದೇಶ ಸರ್ಕಾರದ ಬೇಜವಾಬ್ದಾರಿ ಹೇಳಿಕೆ

ರೈತರ ಸರಣಿ ಸಾವಿಗೆ ಕಾರಣ ಸಾಲಬಾಧೆ ಮತ್ತು ಬೆಳೆ ನಾಶ ಕಾರಣ ಅಲ್ಲ ದೆವ್ವ-ಭೂತಗಳು ಕಾರಣ ಎಂದು ಮಧ್ಯ ಪ್ರದೇಶ ಸರ್ಕಾರ ಬೇಜವಾಬ್ದಾರಿ ಹೇಳಿಕೆ ನೀಡಿದೆ.

ನವದೆಹಲಿ: ರೈತರ ಸರಣಿ ಸಾವಿಗೆ ಕಾರಣ ಸಾಲಬಾಧೆ ಮತ್ತು ಬೆಳೆ ನಾಶ ಕಾರಣ ಅಲ್ಲ ದೆವ್ವ-ಭೂತಗಳು ಕಾರಣ ಎಂದು ಮಧ್ಯ ಪ್ರದೇಶ ಸರ್ಕಾರ ಬೇಜವಾಬ್ದಾರಿ ಹೇಳಿಕೆ ನೀಡಿದೆ.

ಮಧ್ಯ ಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಳಿಂದ ಸುಮಾರು 400ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ನಿನ್ನೆ ಮಧ್ಯ ಪ್ರದೇಶ ಸದನದಲ್ಲಿ ನಡೆದ  ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಶೈಲೈಂದರ್ ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರ "ದೆವ್ವ".... ಹೌದು ಸೆಹೋರ್ ಜಿಲ್ಲೆಯಲ್ಲಿ ಕಳೆದ 4 ವರ್ಷಗಳಿಂದ ನಡೆದಿರುವ  ರೈತರ ಆತ್ಮಹತ್ಯೆಗೆ ದೆವ್ವ ಮತ್ತು ಭಾನಾಮತಿ ಕಾಟವೇ ಕಾರಣ ಎಂದು ಸರ್ಕಾರ ಸದನಕ್ಕೆ ಲಿಖಿತ ಉತ್ತರ ನೀಡಿದೆ.

ಸೆಹೋರ್ ಜಿಲ್ಲೆಯಲ್ಲಿ ನಡೆದ 418 ರೈತ ಆತ್ಮಹತ್ಯೆ ಪ್ರಕರಣಗಳ ಪೈಕಿ 117 ಆತ್ಮಹತ್ಯೆ ಪ್ರಕರಣಗಳು ದೆವ್ವ-ಭೂತ ಮತ್ತು ಭಾನಾಮತಿ ಕಾರಣ ಎಂದು ಮಧ್ಯ ಪ್ರದೇಶದ ಗೃಹ ಸಚಿವ  ಭೂಪೇಂದರ್ ಸಿಂಗ್ ಠಾಕೂರ್ ಉತ್ತರಿಸಿದ್ದಾರೆ. ಗೃಹ ಸಚಿವ ಉತ್ತರ ನೀಡುತ್ತಿದ್ದಂತೆಯೇ ಇಡೀ ಸದನವೇ ಒಂದು ಕ್ಷಣ ಅವಾಕ್ಕಾಗಿ ಹೋಯಿತು. ಬಳಿಕ ಸಾವರಿಸಿಕೊಂಡ ಸದಸ್ಯರು ಈ ಬಗ್ಗೆ  ಗೃಹ ಸಚಿವರು ಹೆಚ್ಚಿನ ಮಾಹಿತಿಗೆ ಆಗ್ರಹಿಸಿದರು.

ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡದ ಗೃಹ ಸಚಿವ ಭೂಪೇಂದರ್ ಸಿಂಗ್ ಠಾಕೂರ್ ಅಧಿಕಾರಿಗಳಿಂದ ಮಾಹಿತಿ ಪಡೆದು ಉತ್ತರಿಸುತ್ತೇನೆ ಎಂದು ಜಾರಿಕೊಂಡರು.

ಇನ್ನು ಭೂಪೇಂದರ್ ಸಿಂಗ್ ಠಾಕೂರ್ ಅವರ ಉತ್ತರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕಾಂಗ್ರೆಸ್ ಸದಸ್ಯ ಪಾಟೀಲ್ ಅವರು, ಅತ್ತ ಪ್ರಧಾನಿ ಮೋದಿ ಡಿಜಿಟಲ್ ಇಂಡಿಯಾ ಮತ್ತು ಮೇಕ್  ಇನ್ ಇಂಡಿಯಾದ ಕನಸು ತೋರಿಸುತ್ತಿದ್ದಾರೆ. ಇತ್ತ ಅವರದ್ದೇ ಮಧ್ಯ ಪ್ರದೇಶ ಸರ್ಕಾರ ರೈತರ ಸಾವಿಗೆ ದೆವ್ವ-ಭೂತದ ಕಥೆ ಕಟ್ಟುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ ರೈತರ ಸಾವಿಗೆ  ಸರ್ಕಾರವೇ ನೈತಿಕ ಹೊಣೆ ಹೊತ್ತು ರೈತರಿಗೆ ಪರಿಹಾರಧನ ನೀಡಬೇಕು ಎಂದು ಹೇಳಿದ್ದಾರೆ.

ಒಟ್ಟಾರೆ ಮಧ್ಯ ಪ್ರದೇಶ ಸರ್ಕಾರದ ಈ ಹೇಳಿಕೆ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೀಡಾಗುತ್ತಿದ್ದು, ಜಬಾಬ್ದಾರಿಯುತ ಸ್ಥಾನದಲ್ಲಿರುವ ಭೂಪೇಂದರ್ ಸಿಂಗ್ ಠಾಕೂರ್ ಅವರ ಈ ಹೇಳಿಕೆಗೆ  ನಗಬೇಕೋ ಅಥವಾ ಅಳಬೇಕೋ ತಿಳಿಯುತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT