ಜಾಕಿರ್ ನಾಯಕ್ 
ದೇಶ

ಇಸೀಸ್ ನೊಂದಿಗೆ ನಂಟು ಶಂಕೆ: ಜಾಕಿರ್ ನಾಯಕ್ ಆಪ್ತನ ಬಂಧನ

ಜಾಕಿರ್ ನಾಯಕ್ ನ ಆಪ್ತನನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಮುಂಬೈ: ಉಗ್ರರ ಸ್ಫೂರ್ತಿ, ವಿವಾದಾತ್ಮಕ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಆತನ ಆಪ್ತನನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಜಾಕಿರ್ ನಾಯ್ಕ್ ನ ಇಸ್ಲಾಮಿಕ್ ಸಂಶೋಧನಾ ಫೌಂಡೇಶನ್ ನೊಂದಿಗೆ ಗುರುತಿಸಿಕೊಂಡಿರುವ ಯುವಕ ಅರ್ಷಿದ್ ಖುರೇಷಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿರುವುದನ್ನು ಸುದ್ದಿ ಸಂಸ್ಥೆ ಎಎನ್ಐ ಸ್ಪಷ್ಟಪಡಿಸಿದೆ.

ಭಯೋತ್ಪಾದಕರೊಂದಿಗೆ ನಂಟು ಹೊಂದಿರುವ ಶಂಕೆಯಲ್ಲಿ ಅರ್ಷಿದ್ ಖುರೇಷಿಯನ್ನು ಬಂಧಿಸಲಾಗಿದ್ದು, ಕೇರಳದಿಂದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸದಸ್ಯರನ್ನು ನೇಮಕ ಮಾಡುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ. ದ್ವೇಷ ಹರಡುವುದು ಸೇರಿದಂತೆ ಸೆಕ್ಷನ್ 153 ಎ, 34 ಐಪಿಸಿ ಹಾಗೂ ಯುಎಪಿಎ 13 ಅಡಿಯಲ್ಲಿ ಅರ್ಷಿದ್ ಖುರೇಷಿಯನ್ನು ಬಂಧಿಸಲಾಗಿದೆ. ಅರ್ಷಿದ್ ಖುರೇಷಿಯ ಭಯೋತ್ಪಾದನೆಯೊಂದಿಗಿನ ನಂಟು ಸಾಬೀತಾದರೆ ಜಾಕಿರ್ ನಾಯಕ್ ನ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ನಿಂದ ಭಯೋತ್ಪಾದನೆಯೊಂದಿಗಿನ ನಂಟು ಆರೋಪದಡಿ ಬಂಧನಕ್ಕೊಳಗಾದ ಮೊದಲ ವ್ಯಕ್ತಿ ಈತನಾಗಲಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT