ಪ್ರಧಾನ ಮಂತ್ರಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಸಮೃದ್ಧ ಹಾಗೂ ಆಧುನೀಕರಣ ಭಾರತ ನಿರ್ಮಾಣದಲ್ಲಿ ಶ್ರೀಗಳ ಪಾತ್ರ ಮುಖ್ಯವಾದದ್ದು:ಮೋದಿ

ಭಾರತವನ್ನು ಸಮೃದ್ಧ ಮತ್ತು ಆಧುನೀಕರಣಗೊಳಿಸಲು ಸ್ವಾಮೀಜಿಗಳು ಮತ್ತು ಧಾರ್ಮಿಕ ನಿಯಮಗಳು ಬಹದೊಡ್ಡ ಪಾತ್ರ ವಹಿಸಬಹುದು ಎಂದು...

ಗೋರಖ್ ಪುರ: ಭಾರತವನ್ನು ಸಮೃದ್ಧ ಮತ್ತು ಆಧುನೀಕರಣಗೊಳಿಸಲು ಸ್ವಾಮೀಜಿಗಳು ಮತ್ತು ಧಾರ್ಮಿಕ ನಿಯಮಗಳು ಬಹದೊಡ್ಡ ಪಾತ್ರ ವಹಿಸಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಅನೇಕ ಸ್ವಾಮೀಜಿಗಳು ಸಾರ್ವಜನಿಕ ಉಪಯೋಗದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ನಮ್ಮ ದೇಶದಲ್ಲಿರುವ ಅನೇಕ ಸ್ವಾಮೀಜಿಗಳು, ಮಠಗಳು ಭಾರತವನ್ನು ಆಧುನೀಕರಣಗೊಳಿಸಿ ಸಮೃದ್ಧಗೊಳಿಸುವಲ್ಲಿ ಮತ್ತು ಜನರಲ್ಲಿ ಮೌಲ್ಯಯುತ ಸಂದೇಶಗಳನ್ನು ಬಿತ್ತುವಲ್ಲಿ ಪ್ರಮುಖ ಪಾತ್ರ ವಹಿಸುವುದು ಈ ಕಾಲದ ಅಗತ್ಯವಾಗಿದೆ. ಅನೇಕರು ಇದನ್ನು ಮಾಡುತ್ತಿದ್ದಾರೆ. ಇದು ದೇಶದ ಭವಿಷ್ಯದ ದೃಷ್ಟಿಯಿಂದ ಉತ್ತಮ ಎಂದು ಅವರು ನುಡಿದರು.
ಗೋರಕ್ ಪುರದ ಬಿಜೆಪಿ ಸಂಸದ ಹಾಗೂ ಹಿಂದುತ್ವ ನಾಯಕ ಯೋಗಿ ಆದಿತ್ಯನಾಥ್ ಅವರ ಗುರು ಮಹಾಂತ್ ಅವೈದ್ಯನಾಥ್ ಅವರ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಅವೈದ್ಯನಾಥ್ ಅಯೋಧ್ಯ ರಾಮ ದೇವಾಲಯಕ್ಕೆ ಸಂಬಂಧಪಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2014ರಲ್ಲಿ ಸಾವಿಗೀಡಾದ ಇವರ ಸ್ಮರಣಾರ್ಥ ಕಳೆದ ವರ್ಷ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಸರ್ಕಾರ ಅಂಚೆಚೀಟಿಯನ್ನು ಬಿಡುಗಡೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT