ಪ್ರಧಾನ ಮಂತ್ರಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಸಮೃದ್ಧ ಹಾಗೂ ಆಧುನೀಕರಣ ಭಾರತ ನಿರ್ಮಾಣದಲ್ಲಿ ಶ್ರೀಗಳ ಪಾತ್ರ ಮುಖ್ಯವಾದದ್ದು:ಮೋದಿ

ಭಾರತವನ್ನು ಸಮೃದ್ಧ ಮತ್ತು ಆಧುನೀಕರಣಗೊಳಿಸಲು ಸ್ವಾಮೀಜಿಗಳು ಮತ್ತು ಧಾರ್ಮಿಕ ನಿಯಮಗಳು ಬಹದೊಡ್ಡ ಪಾತ್ರ ವಹಿಸಬಹುದು ಎಂದು...

ಗೋರಖ್ ಪುರ: ಭಾರತವನ್ನು ಸಮೃದ್ಧ ಮತ್ತು ಆಧುನೀಕರಣಗೊಳಿಸಲು ಸ್ವಾಮೀಜಿಗಳು ಮತ್ತು ಧಾರ್ಮಿಕ ನಿಯಮಗಳು ಬಹದೊಡ್ಡ ಪಾತ್ರ ವಹಿಸಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಅನೇಕ ಸ್ವಾಮೀಜಿಗಳು ಸಾರ್ವಜನಿಕ ಉಪಯೋಗದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ನಮ್ಮ ದೇಶದಲ್ಲಿರುವ ಅನೇಕ ಸ್ವಾಮೀಜಿಗಳು, ಮಠಗಳು ಭಾರತವನ್ನು ಆಧುನೀಕರಣಗೊಳಿಸಿ ಸಮೃದ್ಧಗೊಳಿಸುವಲ್ಲಿ ಮತ್ತು ಜನರಲ್ಲಿ ಮೌಲ್ಯಯುತ ಸಂದೇಶಗಳನ್ನು ಬಿತ್ತುವಲ್ಲಿ ಪ್ರಮುಖ ಪಾತ್ರ ವಹಿಸುವುದು ಈ ಕಾಲದ ಅಗತ್ಯವಾಗಿದೆ. ಅನೇಕರು ಇದನ್ನು ಮಾಡುತ್ತಿದ್ದಾರೆ. ಇದು ದೇಶದ ಭವಿಷ್ಯದ ದೃಷ್ಟಿಯಿಂದ ಉತ್ತಮ ಎಂದು ಅವರು ನುಡಿದರು.
ಗೋರಕ್ ಪುರದ ಬಿಜೆಪಿ ಸಂಸದ ಹಾಗೂ ಹಿಂದುತ್ವ ನಾಯಕ ಯೋಗಿ ಆದಿತ್ಯನಾಥ್ ಅವರ ಗುರು ಮಹಾಂತ್ ಅವೈದ್ಯನಾಥ್ ಅವರ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಅವೈದ್ಯನಾಥ್ ಅಯೋಧ್ಯ ರಾಮ ದೇವಾಲಯಕ್ಕೆ ಸಂಬಂಧಪಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2014ರಲ್ಲಿ ಸಾವಿಗೀಡಾದ ಇವರ ಸ್ಮರಣಾರ್ಥ ಕಳೆದ ವರ್ಷ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಸರ್ಕಾರ ಅಂಚೆಚೀಟಿಯನ್ನು ಬಿಡುಗಡೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT