ನಾಪತ್ತೆಯಾದ ವಾಯುಸೇನೆ ವಿಮಾನಕ್ಕೆ ಮುಂದುವರೆದ ಶೋಧ ಕಾರ್ಯಾಚರಣೆ: ಸಚಿವ ಪರಿಕ್ಕರ್ ಯಿಂದ ಪರಿಶೀಲನೆ 
ದೇಶ

ನಾಪತ್ತೆಯಾದ ವಾಯುಸೇನೆ ವಿಮಾನಕ್ಕೆ ಮುಂದುವರೆದ ಶೋಧ ಕಾರ್ಯಾಚರಣೆ: ಸಚಿವ ಪರಿಕ್ಕರ್ ರಿಂದ ಪರಿಶೀಲನೆ

ಶೋಧ ಕಾರ್ಯಾಚರಣೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಾಂಬರಂ ವಾಯುನೆಲೆಗೆ ತೆರಳಿದ್ದಾರೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ 4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶೋಧ ಕಾರ್ಯಾಚರಣೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಾಂಬರಂ ವಾಯುನೆಲೆಗೆ ತೆರಳಿದ್ದಾರೆ.

ನಾಪತ್ತೆಯಾಗಿರುವ ವಿಮಾನಕ್ಕಾಗಿ ಭಾರತೀಯ ನೌಕಾ ಪಡೆ, ವಾಯು ಪಡೆ, ಕರಾವಳಿ ಭದ್ರತಾಪಡೆ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದು, ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಾವಳಿ ಭದ್ರತಾ ಪಡೆಯ ವಕ್ತಾರ, " ನಾಪತ್ತೆಯಾಗಿರುವ ವಿಮಾನವನ್ನು ಶನಿವಾರ ಬೆಳಿಗ್ಗೆ ವೇಳೆಗೆ ಪತ್ತೆ ಮಾಡುವ ವಿಶ್ವಾಸವಿತ್ತು. ಆದರೆ  ಒಡ್ಡೊಡ್ಡಾದ ಭೂಪ್ರದೇಶದಿಂದ ವಿಮಾನವನ್ನು ಪತ್ತೆ ಮಾಡುವ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ ಎಂದು ಹೇಳಿದ್ದಾರೆ.  ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡುವುದಕ್ಕಾಗಿ 24x7 ಮಾಹಿತಿ ಕೇಂದ್ರವನ್ನು ಪ್ರಾರಂಭಿಸಿರುವ ಭಾರತೀಯ ಕರಾವಳಿ ಪಡೆ, ದಿನಾಂತ್ಯದ ವೇಳೆಗೆ ವಿಮಾನವನ್ನು ಪತ್ತೆ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ. ಕರಾವಳಿ ಕಾವಲು ಪಡೆಯೊಂದಿಗೆ ಎರಡು ಡ್ರೋನಿಯರ್ ಗಳು, ಭಾರತೀಯ ನೌಕಾ ಪಡೆ ನಾಲ್ಕು ನೌಕೆಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT