ನಾಪತ್ತೆಯಾದ ವಾಯುಸೇನೆ ವಿಮಾನಕ್ಕೆ ಮುಂದುವರೆದ ಶೋಧ ಕಾರ್ಯಾಚರಣೆ: ಸಚಿವ ಪರಿಕ್ಕರ್ ಯಿಂದ ಪರಿಶೀಲನೆ 
ದೇಶ

ನಾಪತ್ತೆಯಾದ ವಾಯುಸೇನೆ ವಿಮಾನಕ್ಕೆ ಮುಂದುವರೆದ ಶೋಧ ಕಾರ್ಯಾಚರಣೆ: ಸಚಿವ ಪರಿಕ್ಕರ್ ರಿಂದ ಪರಿಶೀಲನೆ

ಶೋಧ ಕಾರ್ಯಾಚರಣೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಾಂಬರಂ ವಾಯುನೆಲೆಗೆ ತೆರಳಿದ್ದಾರೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ 4 ಮಂದಿ ಸಿಬ್ಬಂದಿ ಸೇರಿದಂತೆ ಸುಮಾರು 29 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶೋಧ ಕಾರ್ಯಾಚರಣೆಯನ್ನು ಪರಿಶೀಲಿಸಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಾಂಬರಂ ವಾಯುನೆಲೆಗೆ ತೆರಳಿದ್ದಾರೆ.

ನಾಪತ್ತೆಯಾಗಿರುವ ವಿಮಾನಕ್ಕಾಗಿ ಭಾರತೀಯ ನೌಕಾ ಪಡೆ, ವಾಯು ಪಡೆ, ಕರಾವಳಿ ಭದ್ರತಾಪಡೆ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದು, ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಾವಳಿ ಭದ್ರತಾ ಪಡೆಯ ವಕ್ತಾರ, " ನಾಪತ್ತೆಯಾಗಿರುವ ವಿಮಾನವನ್ನು ಶನಿವಾರ ಬೆಳಿಗ್ಗೆ ವೇಳೆಗೆ ಪತ್ತೆ ಮಾಡುವ ವಿಶ್ವಾಸವಿತ್ತು. ಆದರೆ  ಒಡ್ಡೊಡ್ಡಾದ ಭೂಪ್ರದೇಶದಿಂದ ವಿಮಾನವನ್ನು ಪತ್ತೆ ಮಾಡುವ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ ಎಂದು ಹೇಳಿದ್ದಾರೆ.  ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡುವುದಕ್ಕಾಗಿ 24x7 ಮಾಹಿತಿ ಕೇಂದ್ರವನ್ನು ಪ್ರಾರಂಭಿಸಿರುವ ಭಾರತೀಯ ಕರಾವಳಿ ಪಡೆ, ದಿನಾಂತ್ಯದ ವೇಳೆಗೆ ವಿಮಾನವನ್ನು ಪತ್ತೆ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ. ಕರಾವಳಿ ಕಾವಲು ಪಡೆಯೊಂದಿಗೆ ಎರಡು ಡ್ರೋನಿಯರ್ ಗಳು, ಭಾರತೀಯ ನೌಕಾ ಪಡೆ ನಾಲ್ಕು ನೌಕೆಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT