ಐಎಎಫ್ ವಿಮಾನಕ್ಕಾಗಿ ಮುಂದುವರೆದ ಶೋಧ ಕಾರ್ಯ (ಸಂಗ್ರಹ ಚಿತ್ರ) 
ದೇಶ

ಐಎಎಫ್ ವಿಮಾನಕ್ಕಾಗಿ ಮುಂದುವರೆದ ಶೋಧ ಕಾರ್ಯ: ಪರಿಕ್ಕರ್ ವೈಮಾನಿಕ ಸಮೀಕ್ಷೆ

ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದಲ್ಲಿ ಎ ಪಿ8I, ಒಂದು ಸಿಜಿಡಿಒ ಹಾಗೂ ಒಂದು ಸಿ 130 ಯನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಚೆನ್ನೈಗೆ ಆಗಮಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಚೆನ್ನೈ ಗೆ ಆಗಮಿಸುತ್ತಿದ್ದಂತೆಯೇ ತಾಂಬರಂ ಗೆ ವಿಮಾನದಲ್ಲಿ ಪ್ರಯಾಣಿಸಿದ ಮನೋಹರ್ ಪರಿಕ್ಕರ್, ಶೋಧ ಕಾರ್ಯಾಚರಣೆ ನಡೆಸಿದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಜು.22 ರಂದು ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ವಿಮಾನ ಚೆನ್ನೈ ನಿಂದ ಪೂರ್ವಕ್ಕೆ 280 ಕಿಮಿ ದೂರ ಇರಬೇಕಾದರೆ ರೇಡಾರ್ ಸಂಪರ್ಕ ಕಡಿದುಕೊಂಡಿತ್ತು. ಸುಮಾರು ನೌಕಾ ಪಡೆಯ 12 , ಕರಾವಳಿ ಕಾವಲು ಪಡೆಯ  ಹಡಗುಗಳು ಶುಕ್ರವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿವೆ. ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು  ಶೋಧ ಕಾರ್ಯಾಚರಣೆಯಲ್ಲಿ ಜಲಾಂತರ್ಗಾಮಿ ನೌಕೆಯನ್ನೂ ಬಳಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT