ಮುಸ್ಲಿಂ 
ದೇಶ

ಜಾಕಿರ್ ನಾಯಕ್ ಬಂಧಿತ ಸಹವರ್ತಿಗಳಿಂದ ಇಸ್ಲಾಂಗೆ 800 ಯುವಕರ ಮತಾಂತರ

ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯಕ್ ಸಹವರ್ತಿಗಳಾದ ರಿಜ್ವಾನ್ ಖಾನ್, ಆರ್ಷಿದ್ ಖುರೇಷಿಯನ್ನು ಇತ್ತೀಚೆಗಷ್ಟೇ ಬಂಧಿಸಲಾಗಿದ್ದು, ಬಂಧಿತರು...

ಮುಂಬೈ: ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯಕ್ ಸಹವರ್ತಿಗಳಾದ ರಿಜ್ವಾನ್ ಖಾನ್, ಆರ್ಷಿದ್ ಖುರೇಷಿಯನ್ನು ಇತ್ತೀಚೆಗಷ್ಟೇ ಬಂಧಿಸಲಾಗಿದ್ದು, ಬಂಧಿತರು ದೇಶಾದ್ಯಂತ 800 ಯುವಕರನ್ನು ಇಸ್ಲಾಂಗೆ ಮತಾಂತರಿಸಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಹಿರಂಗ ಪಡಿಸಿದೆ.

ಬಂಧಿತರಿಂದ ವಶಕ್ಕೆ ಪಡೆದ ದಾಖಲೆಗಳು ಹಾಗೂ ಆರೋಪಿಗಳ ವಿಚಾರಣೆ ಬಳಿಕ ಎಟಿಎಸ್ ಈ ಆಘಾತಕಾರಿ ವಿಷಯವನ್ನು ಬಯಲು ಮಾಡಿದ್ದು, ಆರೋಪಿಗಳು ಮುಂಬೈ ಸೇರಿದಂತೆ ದೇಶಾದ್ಯಂತ ಹಿಂದು-ಕ್ರೈಸ್ತ ಯುವಕರನ್ನು ಇಸ್ಲಾಂಗೆ ಮತಾಂತರಗೊಳಿಸಿದ್ದರು. ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಹಣದ ಆಮಿಷ ಹಾಗೂ ಕೈದಿಗಳಿಗೆ ಕಾನೂನು ನೆರವು ನೀಡಿ ಅವರನ್ನು ಇಸ್ಲಾಂನತ್ತ ಸೆಳೆಯುತ್ತಿದ್ದರು ಎಂದು ಎಟಿಎಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಕೇರಳದಿಂದ ನಾಪತ್ತೆ ಆಗಿ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಸೇರಿದ್ದಾರೆ ಎನ್ನಲಾದ 21 ಜನರ ಜತೆ ಇವರು ಸಂಪರ್ಕದಲ್ಲಿದ್ದರೇ ಎಂಬುದರ ಬಗ್ಗೆ ಎಟಿಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT