ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ 
ದೇಶ

ಸಂಸತ್ ಅಧಿವೇಶನದಲ್ಲಿ ಭಾಗವಹಿಸದಂತೆ ಭಗವಂತ್ ಮಾನ್ ಗೆ ಸ್ಪೀಕರ್ ಸೂಚನೆ

ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಸಂಸತ್ ಕಲಾಪದಲ್ಲಿ ಭಾಗವಹಿಸಂದತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸೂಚನೆ ನೀಡಿದ್ದಾರೆ.

ನವದೆಹಲಿ: ಸಂಸತ್ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಸಂಸತ್ ಕಲಾಪದಲ್ಲಿ ಭಾಗವಹಿಸಂದತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸೂಚನೆ ನೀಡಿದ್ದಾರೆ.

ನಿಯಮ ಉಲ್ಲಂಘಿಸಿರುವ ಪ್ರಕರಣದ ಕುರಿತು ನೇಮಿಸಲಾಗಿರುವ ಸಮಿತಿಯ ತನಿಖೆ ಮುಕ್ತಾಯಗೊಳ್ಳುವವರೆಗೂ ಸಂಸತ್ ಅಧಿವೇಶನದಲ್ಲಿ ಭಾಗವಹಿಸದಂತೆ ಸುಮಿತ್ರಾ ಮಹಾಜನ್ ಭಗವಂತ್ ಮಾನ್ ಗೆ ಸೂಚನೆ ನೀಡಿದ್ದಾರೆ. 9 ಸದಸ್ಯರ ಸಮಿತಿ ಆಗಸ್ಟ್ 3 ರಂದು ವರದಿ ಪ್ರಕಟಿಸುವ ನಿರೀಕ್ಷೆ ಇದ್ದು, ಅಲ್ಲಿಯ ವರೆಗೆ ಭಗವಂತ್ ಮಾನ್ ಸಂಸತ್ ಅಧಿವೇಶನದಲ್ಲಿ ಭಾಗವಹಿಸುವಂತಿಲ್ಲ.

ಕಳೆದ ವಾರದ ಸಂಸತ್ ಅಧಿವೇಶನದ್ಲಲಿ ಭಾಗವಹಿಸಿದ್ದ ಭಗವಂತ್ ಮಾನ್, ತಮ್ಮ ನಿವಾಸದಿಂದ ಸಂಸತ್ ಭವನದ ವರೆಗಿನ ಪ್ರಯಾಣವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಸಂಸತ್ ನಲ್ಲಿ ಭದ್ರತೆಯುಳ್ಳ ಪ್ರದೇಶಗಳನ್ನು ಚಿತ್ರೀಕರಿಸಲಾಗಿದ್ದು, ಇದರಿಂದ ಸಂಸತ್ ನ ಭದ್ರತೆಗೆ ಧಕ್ಕೆ ಉಂಟಾಗಲಿದೆ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದರು, ಈ ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ಭಗವಂತ್ ಮಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT