ನರೇಶ್ ಯಾದವ್ 
ದೇಶ

ಆಪ್ ಶಾಸಕ ನರೇಶ್‌ ಯಾದವ್‌ ಎರಡು ದಿನ ಪೊಲೀಸ್ ವಶಕ್ಕೆ

ಕುರಾನ್‌ ಅಪವಿತ್ರಗೊಳಿಸಿದ ಆರೋಪದ ಮೇಲೆ ಭಾನವಾರ ಬಂಧನಕ್ಕೊಳಗಾಗಿದ್ದ ಆಪ್‌ ಶಾಸಕ ನರೇಶ್‌ ಯಾದವ್‌ ಅವರನ್ನು ಪಂಜಾಬ್‌ ಕೋರ್ಟ್...

ಚಂಡೀಗಢ: ಕುರಾನ್‌ ಅಪವಿತ್ರಗೊಳಿಸಿದ ಆರೋಪದ ಮೇಲೆ ಭಾನವಾರ ಬಂಧನಕ್ಕೊಳಗಾಗಿದ್ದ ಆಪ್‌ ಶಾಸಕ ನರೇಶ್‌ ಯಾದವ್‌ ಅವರನ್ನು ಪಂಜಾಬ್‌ ಕೋರ್ಟ್ ಸೋಮವಾರ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಆದೇಶಿಸಿದೆ.
ಜೂನ್‌ 24ರಂದು ನಡೆದ ಕುರಾನ್‌ ದಹನ ಪ್ರಕರಣ ಸಂಬಂಧ ನಿನ್ನೆ ಸಂಜೆನರೇಶ್ ಯಾದವ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು. ಇಂದು ಚಂಡೀಗಢದಿಂದ 100 ಕಿ.ಮೀ.ದೂರದಲ್ಲಿರುವ ಮುಸ್ಲಿಂ ಪ್ರಾಬಲ್ಯವಿರುವ ಮಾಲೇರ್ ಕೋಟ್ಲಾ ಕೋರ್ಟ್ ಗೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾಗಿರುವ ಪ್ರಮುಖ ಆರೋಪಿ ವಿಜಯ್‌ ಕುಮಾರ್‌ ಎಂಬಾತ ವಿಚಾರಣೆ ವೇಳೆ ನರೇಶ್‌ ಯಾದವ್‌ ಅವರ ಅಣತಿಯಂತೆ ನಾನು ಕುರಾನ್‌ ನನ್ನು ಹರಿದಿ¨ªೆ ಎಂದು ಮಾಹಿತಿ ನೀಡಿರುವ ಕಾರಣ ಪೊಲೀಸರು ಆಪ್ ಶಾಸಕನ ವಿರುದ್ಧವೂ ಎಫ್ಐಆರ್‌ ದಾಖಲಿಸಿಕೊಂಡಿದ್ದರು. 
"ಈ ಕೃತ್ಯ ಎಸಗಲು ನನಗೆ 1 ಕೋಟಿ ರುಪಾಯಿ ಆಮಿಷ ಒಡ್ಡಲಾಗಿತ್ತು. ದೀನಾನಗರ್‌ ಮತ್ತು ಪಠಾಣ್‌ಕೋಟ್‌ ದಾಳಿಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದ್ದು, ನಾವು ಪಾಕಿಸ್ಥಾನ ಮತ್ತು ಮುಸ್ಲಿಂ ವಿರೋಧಿಗಳು' ಎಂದು ವಿಜಯ್‌ ಕುಮಾರ್‌ ಹೇಳಿಕೆ ನೀಡಿದ್ದ. ಬಳಿಕ ನ್ಯಾಯಾಲಯವು ಯಾದವ್‌ ವಿರುದ್ಧ ಬಂಧನದ ವಾರಂಟ್‌ ಜಾರಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT