ಅಬ್ದುಲ್ ಕಲಾಂ 
ದೇಶ

ಅಬ್ದುಲ್ ಕಲಾಂ ಪ್ರತಿಮೆ ನಿರ್ಮಾಣಕ್ಕೆ ಇಸ್ಲಾಮಿಕ್ ಸಂಘಟನೆಯಿಂದ ವಿರೋಧ

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಸಮಾಧಿ ಬಳಿ ಡಾ.ಕಲಾಂ ಅವರ ಪ್ರತಿಮೆಯನ್ನು ನಿರ್ಮಿಸಲು ಇಸ್ಲಾಮಿಕ್ ಸಂಘಟನೆಯೊಂದು ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ರಾಮೇಶ್ವರಂ: ಈ ವರದಿ ನಿಮಗೆ ಅಚ್ಚರಿ ಎಣಿಸಬಹುದು ಆದರೆ ಸತ್ಯ, ವಿಷಯವೇನೆಂದರೆ ರಾಮೇಶ್ವರಂ ನ  ಪೇಯ್ ಕರಂಬು ಬಳಿ ಇರುವ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಸಮಾಧಿ ಬಳಿ ಡಾ.ಕಲಾಂ ಅವರ ಪ್ರತಿಮೆಯನ್ನು ನಿರ್ಮಿಸಲು ಇಸ್ಲಾಮಿಕ್ ಸಂಘಟನೆಯೊಂದು ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಹಿಂದು ಪತ್ರಿಕೆಯಲ್ಲಿ ಪ್ರಕಟವಾದ ವರದಿಯುಯ ಪ್ರಕಾರ ರಾಮನಾಥಪುರಂ ಜಿಲ್ಲೆಯ ಜಮಾತ್-ಉಲ್- ಉಲಾಮಾ ಪರಿಷತ್ ಅಬ್ದುಲ್ ಕಲಾಂ ಅವರ ಪುತ್ಥಳಿ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು,  ಪ್ರತಿಮೆ ನಿರ್ಮಾಣ ಮುಸ್ಲಿಮರ ವೈಯಕ್ತಿಕ ಕಾನೂನು ಷರಿಯಾಗೆ ವಿರೋಧವಾಗಿದೆ ಎಂದು ವಾದಿಸುತ್ತಿದೆ.

ಇಸ್ಲಾಮ್ ನಲ್ಲಿ ಮೂರ್ತಿ ಪೂಜೆ, ವ್ಯಕ್ತಿ ಪೂಜೆಗೆ ವಿರೋಧವಿದೆ ಎಂದು ಜಮಾತ್-ಉಲ್- ಉಲಾಮಾ ಸಂಘಟನೆ ಅಧ್ಯಕ್ಷರು ತಿಳಿಸಿದ್ದಾರೆ. ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಪಾಲಿಸಿ, ಭಾರತದ ಅಭಿವೃದ್ಧಿಗೆ ಅವರು ಕಂಡಿದ್ದ ಕನಸನ್ನು ನನಸು ಮಾಡುವುದೇ ನಾವು ಅವರಿಗೆ ಸೂಚಿಸುವ ಗೌರವ ಎಂದು ಜಮಾತ್-ಉಲ್- ಉಲಾಮಾ ಸಂಘಟನೆ ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!