ದಯಾಶಂಕರ್ ಸಿಂಗ್ 
ದೇಶ

ಮಾಯಾವತಿ ವಿರುದ್ಧ ಹೇಳಿಕೆ: ಬಂಧನಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದಯಾಶಂಕರ್

ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಉಚ್ಚಾಟಿತ ನಾಯಕ...

ಲಖನೌ: ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರು ತಮ್ಮ ವಿರುದ್ಧ ಸ್ಥಳೀಯ ಕೋರ್ಟ್ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಗೆ ತಡೆ ಕೋರಿ ಅಲಹಬಾದ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಂಧನ ವಾರಂಟ್ ಗೆ ತಡೆ ಕೋರಿ ದಯಾಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಸ್ವೀಕರಿಸಿದ್ದು, ಜುಲೈ 28ಕ್ಕೆ ವಿಚಾರಣೆ ನಿಗದಿಪಡಿಸಿದೆ.
ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ದಯಾಶಂಕರ್ ಅವರ ವಿರುದ್ಧ ಸೋಮವಾರ ಲಖನೌನ ಮುಖ್ಯ ನ್ಯಾಯಿಕ ದಂಡಾಧಿಕಾರಿ(ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್) ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದರು.
ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದ ದಯಾಶಂಕರ್ ಅವರು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಹೇಳಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿತ್ತು. ಅಲ್ಲದೆ ಬಿಎಸ್ಪಿ ಅವರ ವಿರುದ್ಧ ಎಫ್ಐಆರ್ ಸಹ ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT