ಪ್ರಧಾನಿ ಮೋದಿ, ಬಚ್ಚನ್ ಅವರನ್ನು ಪೆಲ್ಲೆಟ್ ಗುಂಡೇಟಿಗೆ ಗುರಿಯಾದವರಂತೆ ಚಿತ್ರಿಸಿದ ಪಾಕ್ ಸಂಘಟನೆ 
ದೇಶ

ಪ್ರಧಾನಿ ಮೋದಿ, ಬಚ್ಚನ್ ಅವರನ್ನು ಪೆಲ್ಲೆಟ್ ಗುಂಡೇಟಿಗೆ ಗುರಿಯಾದವರಂತೆ ಚಿತ್ರಿಸಿದ ಪಾಕ್ ಸಂಘಟನೆ

ಪಾಕಿಸ್ತಾನದ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್ ಬಚ್ಚನ್ ಅವರ ಭಾವ ಚಿತ್ರವನ್ನು ಪೆಲ್ಲೆಟ್ ಗುಂಡಿನಿಂದ ಗಾಯಗೊಂಡಿರುವ ರೀತಿಯಲ್ಲಿ ಪ್ರಕಟಿಸಿದೆ.

ನವದೆಹಲಿ: ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ಮುಜಾಫರ್ ವನಿ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವರ ಮೇಲೆ ಭಾರತೀಯ ಸೇನೆ ಪೆಲ್ಲೆಟ್ ಗನ್ ಪ್ರಯೋಗಿಸಿರುವುದನ್ನು ಖಂಡಿಸಿರುವ ಪಾಕಿಸ್ತಾನದ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ, ಅಮಿತಾಬ್ ಬಚ್ಚನ್ ಅವರ ಭಾವ ಚಿತ್ರವನ್ನು ಪೆಲ್ಲೆಟ್ ಗುಂಡಿನಿಂದ ಗಾಯಗೊಂಡಿರುವ ರೀತಿಯಲ್ಲಿ ಪ್ರಕಟಿಸಿದೆ.

ಭಾರತೀಯ ಸೇನೆ ಕಾಶ್ಮೀರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಬಳಸುತ್ತಿರುವ ಪೆಲ್ಲೆಟ್ ಗನ್ ಹಾನಿಕಾರಕವಲ್ಲದ ಶಾಸ್ತ್ರವಾಗಿದೆ ಎಂದು ಹೇಳಲಾಗುತ್ತಿದೆಯಾದರೂ, ರಬ್ಬರ್ ಪೆಲ್ಲೆಟ್ ಗಳು ತಾಗಿದರೆ ಆ ವ್ಯಕ್ತಿ ದೃಷ್ಟಿಯನ್ನು ಕಳೆದುಕೊಳ್ಳಬಹುದು ಎಂದು ವೈದ್ಯರು ಹೇಳಿದ್ದಾರೆ.

ಕಾಶ್ಮೀರದಲ್ಲಿ ಸೇನೆ ಪೆಲ್ಲೆಟ್ ಗನ್ ಗಳನ್ನು ಬಳಸುವುದನ್ನು ವಿರೋಧಿಸಿರುವ ಪಾಕಿಸ್ತಾನದ ನೆವರ್ ಫರ್ಗೆಟ್ ಪಾಕಿಸ್ತಾನ್ ಎಂಬ ಗುಂಪು, ಈ ಬಗ್ಗೆ ಜನರ ಗಮನ ಸೆಳೆಯಲು ಆನ್ ಲೈನ್ ಅಭಿಯಾನವನ್ನು ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಪೆಲ್ಲೆಟ್ ಗನ್ ಗುಂಡೇಟಿನಿಂದ ಕಣ್ಣಿನ ದೃಷ್ಟಿ ಕಳೆದುಕೊಂಡವರಂತೆ, ಅಮಿತಾಬ್ ಬಚ್ಚನ್, ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ, ಫೇಸ್ ಬುಕ್ ಸ್ಥಾಪಕ ಮಾರ್ಕ್ ಜುಕರ್ಬರ್ಗ್ ಅವರು ಪೆಲ್ಲೆಟ್ ಗನ್ ನಿಂದ ಗುಂಡೇಟಿಗೆ ಗುರಿಯಾದವರಂತೆ ಫೋಟೋ ಶಾಪ್ ಮಾಡಿರುವ ಚಿತ್ರಗಳನ್ನು ಅಂತರ್ಜಾಲದಲ್ಲಿ ಹರಿಯಬಿಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT