ದೇಶ

ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕಕ್ಕೆ ಶಂಕುಸ್ಥಾಪನೆ

ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯಸ್ಮರಣೆಯ ದಿನ(ಜು.27) ರಂದೇ ಶಂಕುಸ್ಥಾಪನೆ ನೆರವೇರಿದೆ.

ರಾಮೇಶ್ವರಂ: ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯಸ್ಮರಣೆಯ ದಿನ(ಜು.27) ರಂದೇ ಶಂಕುಸ್ಥಾಪನೆ ನೆರವೇರಿದೆ.

ಪೇಯ್ ಕರಂಬು ನಲ್ಲಿ ಕಲಾಂ ಸಮಾಧಿಯ ಬಳಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸ್ಮಾರಕ ನಿರ್ಮಾಣ ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಮುಕ್ತಾಯಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ನಗರಾಭಿವೃದ್ಧಿ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಯ ರಾಜ್ಯ ಸಚಿವ ರಾಧಾಕೃಷ್ಣನ್ ಹಾಗೂ ತಮಿಳುನಾಡು ಸರ್ಕಾರದ ಸಚಿವರು ಭಾಗವಹಿಸಿದ್ದರು. 
ಮೊದಲನೇ ಪುಣ್ಯ ಸ್ಮರಣೆ ಅಂಗವಾಗಿ ಕಲಾಂ ಸಮಾಧಿ ಬಳಿ ಕಲಾಂ ಅವರ ಸಹಜ ಗಾತ್ರದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಅಬ್ದುಲ್ ಕಲಾಂ ಅವರ ಸ್ಮಾರಕ ಮುಂದಿನ ಪೀಳಿಗೆಗೆ ಇಂತಹ ಮಹನೀಯ ವ್ಯಕ್ತಿಯೊಬ್ಬರು ಈ ಭೂಮಿಯಲ್ಲಿ ಜನಿಸಿದ್ದರು ಎಂಬುದನ್ನು ತಿಳಿಸುತ್ತದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಜು.27, 2015 ರಂದು ಅಬ್ದುಲ್ ಕಲಾಂ ಅವರು ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT