ಮಹಾದಾಯಿ ತೀರ್ಪಿನಲ್ಲಿ ಕರ್ನಾಟಕದ ಅರ್ಜಿ ತಿರಸ್ಕಾರ, ರಾಜ್ಯಕ್ಕೆ ಹಿನ್ನಡೆ 
ದೇಶ

ಮಹಾದಾಯಿ ತೀರ್ಪಿನಲ್ಲಿ ಕರ್ನಾಟಕದ ಅರ್ಜಿ ತಿರಸ್ಕಾರ, ರಾಜ್ಯಕ್ಕೆ ಹಿನ್ನಡೆ

ಮಹಾದಾಯಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯ ತೀರ್ಪು ಪ್ರಕಟಗೊಂಡಿದ್ದು, ಮಹಾದಾಯಿ ನ್ಯಾಯಾಧಿಕರಣ ಕರ್ನಾಟಕದ ಅರ್ಜಿಯನ್ನು ತಿರಸ್ಕರಿಸಿದೆ.

ನವದೆಹಲಿ: ಮಹಾದಾಯಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯ ತೀರ್ಪು ಪ್ರಕಟಗೊಂಡಿದ್ದು, ಮಹಾದಾಯಿ ನ್ಯಾಯಾಧಿಕರಣ ಕರ್ನಾಟಕದ ಅರ್ಜಿಯನ್ನು ತಿರಸ್ಕರಿಸಿದೆ.

ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾ. ಜೆಎಂ ಪಾಂಚಾಲ್ ಅಧ್ಯಕ್ಷತೆಯ ನ್ಯಾಯಾಧಿಕರಣ ಕರ್ನಾಟಕದ ಅರ್ಜಿಯನ್ನು ತಿರಸ್ಕರಿಸಿದ್ದು,  7.65 ಟಿಎಂಸಿ ಅಡಿ ನೀರು ಬಳಕೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಾಧಿಕರಣದ ತೀರ್ಪಿನಿಂದ ಕರ್ನಾಟಕಕ್ಕೆ ಹಿನ್ನಡೆಯುಂಟಾಗಿದೆ.

ಗೋವಾ ಮತ್ತು ಕರ್ನಾಟಕದ ಪರ ವಕೀಲರು ಸೋಮವಾರ ಮಂಡಿಸಿದ ವಾದ ಆಲಿಸಿದ ಜೆ.ಎಂ. ಪಾಂಚಾಲ್‌ ನೇತೃತ್ವದ ತ್ರಿಸದಸ್ಯ ಪೀಠವು, ತೀರ್ಪನ್ನು ಜು.27 ಕ್ಕೆ ಕಾಯ್ದಿರಿಸಿತ್ತು. ಮಹಾದಾಯಿ ನೀರು ಹಂಚಿಕೆಗೆ ವಿರೋಧ ವ್ಯಕ್ತಪಡಿಸಿರುವ ಗೋವಾ, ನದಿ ತಿರುವು ಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡಬಾರದು ಎಂಬ ವಾದವನ್ನು ಮತ್ತೆ ಮಂಡಿಸಿತು.

ಮಲಪ್ರಭಾ ನದಿಯು ಕೃಷ್ಣಾ ಕಣಿವೆ ವ್ಯಾಪ್ತಿಗೆ ಸೇರಿದ್ದು  ನದಿಗೆ ನಿರ್ಮಿಸಿರುವ ಜಲಾಶಯಕ್ಕಾಗಿ ಕರ್ನಾಟಕವು  ಮಹಾದಾಯಿ ಕಣಿವೆಯ ನೀರಿಗೆ ಬೇಡಿಕೆ ಸಲ್ಲಿಸಿರುವುದು  ಸರಿಯಲ್ಲ ಎಂಬುದು ಗೋವಾ ವಾದವಾಗಿದೆ.

ಮಹದಾಯಿ ನ್ಯಾಯಾಧಿಕರಣ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ರಾಜ್ಯದ ಹಿತ ಕಾಪಾಡಲು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು, ಇನ್ನು ನನಗೆ ತೀರ್ಪಿನ ಅಂಶ ಏನಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಸರ್ಕಾರಿ ವಕೀಲರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.  ನೆಲ ಜಲ ಭಾಷೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಡುತ್ತೇವೆ, ಸರ್ವಪಕ್ಷ ಸಭೆ ಕರೆದು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT