ಮನೋಹರ್ ಪರಿಕ್ಕರ್ 
ದೇಶ

ಸಮುದ್ರದಲ್ಲಿ ಕೆಲ ವಸ್ತುಗಳು ಪತ್ತೆ, ಎಎನ್-32 ವಿಮಾನದ್ದೆ ಎಂಬ ಬಗ್ಗೆ ಪರಿಶೀಲನೆ: ಪರಿಕ್ಕರ್

ನಾಪತ್ತೆಯಾಗಿರುವ ವಾಯುಪಡೆಯ ಎಎನ್-32 ವಿಮಾನಕ್ಕಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಬುಧವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

ರಾಮೇಶ್ವರಂ: ನಾಪತ್ತೆಯಾಗಿರುವ ವಾಯುಪಡೆಯ ಎಎನ್-32 ವಿಮಾನಕ್ಕಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಬುಧವಾರ ಆರನೇ ದಿನಕ್ಕೆ ಕಾಲಿಟ್ಟಿದೆ.
ಈ ಮಧ್ಯೆ ಶೋಧ ಕಾರ್ಯಾಚರಣೆ ನಡೆಸುತ್ತಿರುವ ಹಡಗುಗಳಿಗೆ ಬಂಗಾಳಕೊಲ್ಲಿಯಲ್ಲಿ ಕೆಲವು ವಸ್ತುಗಳು ಸಿಕ್ಕಿದ್ದು, ಅದು ಕಾಣೆಯಾದ ವಿಮಾನಕ್ಕೆ ಸೇರಿದ್ದೇ ಅಥವಾ ಇಲ್ಲ ಎಂಬುದರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ ಎಂದು ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಹೇಳಿದ್ದಾರೆ.
ಹಡಗಿನಿಂದ ವಸ್ತುಗಳು ಸಿಕ್ಕಿರುವ ಕುರಿತು ಮಾಹಿತಿ ಬಂದಿದೆ, ಆದರೆ ಅವು ಕಾಣೆಯಾದ ವಿಮಾನಕ್ಕೆ ಸೇರಿರುವುದೇ ಎಂಬುದು ಪರಿಶೀಲನೆ ನಡೆಸಿದ ಬಳಿಕ ತಿಳಿದು ಬರಲಿದೆ. ಹಾಗಾಗಿ ಆ ವಸ್ತುಗಳು ಕಾಣೆಯಾದ ವಿಮಾನದ್ದೇ ಎಂದು ನಾವು ಈಗಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದಿದ್ದಾರೆ.
ವಾಯುಪಡೆ, ನೌಕಾಪಡೆ ಮತ್ತು ಕರಾವಳಿ ರಕ್ಷಣಾ ಪಡೆಗಳು ವಿಮಾನಕ್ಕಾಗಿ ಶೋಧ ಕಾರ್ಯ ಮುಂದುವರೆಸಿವೆ ಎಂದು ಪರಿಕ್ಕರ್ ತಿಳಿಸಿದ್ದಾರೆ.
ಜುಲೈ 22 ರಂದು ಕಾಣೆಯಾಗಿರುವ ವಿಮಾನಕ್ಕಾಗಿ ನೌಕಾಪಡೆ ಮತ್ತು ಕರಾವಳಿ ರಕ್ಷಣಾ ಪಡೆಯ 17 ಹಡಗುಗಳು ಮತ್ತು 23 ವಿಮಾನ ಮತ್ತು ಹೆಲಿಕಾಪ್ಟರ್​ಗಳು ಶೋಧ ಕಾರ್ಯ ನಡೆಸುತ್ತಿವೆ.
ಮಾರಿಷಸ್ ಬಳಿ ಸಂಶೋಧನೆ ನಡೆಸುತ್ತಿರುವ ‘ಸಾಗರ ನಿಧಿ’ ಎಂಬ ಸಂಶೋಧನಾ ನೌಕೆಯನ್ನು ಶೋಧ ಕಾರ್ಯದಲ್ಲಿ ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದು ಪರಿಕ್ಕರ್ ಮಂಗಳವಾರ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT