ದೇಶ

ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಲಿ ವ್ಯಕ್ತಿಯ ಕೈವಾಡ? ಸುಬ್ರಮಣಿಯನ್ ಸ್ವಾಮಿ

Shilpa D

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ  ಹತ್ಯೆಯಲ್ಲಿ ಇಟಾಲಿಯನ್ ವ್ಯಕ್ತಿಯ ಕೈವಾಡವಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಮಹಾತ್ಮ ಗಾಂಧಿ ಹತ್ಯೆಯ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಎಂದು ಪಟ್ಟು ಹಿಡಿದಿರುವ ಸುಬ್ರಮಣಿಯನ್ ಸ್ವಾಮಿ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ನಾಥೂರಾಮ್ ಗೂಡ್ಸೆ ಅವರ ಗುಂಡಿಗೆ ಮಹಾತ್ಮ ಗಾಂಧಿ ಬಲಿಯಾಗಿದ್ದಾರೆ, ಆದರೆ ಹತ್ಯೆಗೆ ಬಳಸಿದ ಗನ್ ಇಟಲಿಯಿಂದ ಇಂಪೋರ್ಟ್ ಮಾಡಿರುವುದು ಎಂದು ತಿಳಿದು ಬಂದಿದೆ. ಹೀಗಾಗಿ ಮಹಾತ್ಮ ಗಾಂಧಿ ಹತ್ಯೆಗೂ ಹಾಗೂ ಇಟಲಿಯ ವ್ಯಕ್ತಿಗೂ ಸಂಬಂಧವಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಆಗಸ್ಟ್ 15 ರ ನಂತರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿವರಗಳನ್ನು ಬಹಿರಂಗ ಪಡಿಸುವುದಾಗಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

SCROLL FOR NEXT