ಅಜ್ಮೀರ್ ದರ್ಗಾ 
ದೇಶ

ಹಿಂದುಗಳು ಪೂಜಿಸುವ 'ಗೋವು' ರಕ್ಷಿಸಿ: ಮುಸ್ಲಿಂರಿಗೆ ಅಜ್ಮೀರ್ ದರ್ಗಾ ಧಾರ್ಮಿಕ ಮುಖಂಡನಿಂದ ಕರೆ

ಹಿಂದೂಗಳು ಪೂಜಿಲ್ಪಡುವ ಗೋವುಗಳನ್ನು ರಕ್ಷಿಸಬೇಕು ಎಂದು ಮುಸ್ಲಿಂರಿಗೆ ಅಜ್ಮೀರ್ ದರ್ಗಾದ ಮುಖ್ಯಸ್ಥ ಜೈನುಲ್ ಅಬೆದಿನ್ ಅಲಿ ಖಾನ್ ಮನವಿ ಮಾಡಿದ್ದಾರೆ...

ಜೈಪುರ: ಹಿಂದೂಗಳು ಪೂಜಿಲ್ಪಡುವ ಗೋವುಗಳನ್ನು ರಕ್ಷಿಸಬೇಕು ಎಂದು ಮುಸ್ಲಿಂರಿಗೆ ಅಜ್ಮೀರ್ ದರ್ಗಾದ ಮುಖ್ಯಸ್ಥ ಜೈನುಲ್ ಅಬೆದಿನ್ ಅಲಿ ಖಾನ್ ಮನವಿ ಮಾಡಿದ್ದಾರೆ.

ಗೋಮಾಂಸ ವಿಷಯವನ್ನೇ ಇಟ್ಟುಕೊಂಡು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಿಂದು-ಮುಸ್ಲಿಂರ ನಡುವಿನ ಸೌಹಾರ್ದತೆಯನ್ನು ಕದಡುತ್ತಿದ್ದಾರೆ. ಹೀಗಾಗಿ ದೇಶದ ಹಿತಾಸಕ್ತಿಗಾಗಿ ಮುಸ್ಲಿಂರು ಗೋವುಗಳನ್ನು ರಕ್ಷಿಸುವ ಮೂಲಕ ಅದನ್ನು ಮಾದರಿಯಾಗಿ ತೋರಿಸಬೇಕು ಎಂದರು.

ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಆದರೆ ಗೋಮಾಂಸ ಭಕ್ಷಣೆ ಈಗ ಧರ್ಮದ ಹೊಸ ಅಸ್ತ್ರವಾಗಿ ಬಳಕೆಯಾಗುತ್ತಿದ್ದು, ಇದು ದೇಶದ ಘನತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಇತಿಹಾಸದಲ್ಲಿ ಪ್ರವಾದಿ ಮೊಹಮ್ಮದರು ಕೂಡಾ ಗೋ ಮಾಂಸ ಭಕ್ಷಣೆ ವಿರುದ್ಧ ಉಪದೇಶ ನೀಡಿದ್ದರು. ಇನ್ನು ಸೂಫಿ ಸಂತರು ಮತ್ತು ಧಾರ್ಮಿಕ ಮುಖಂಡರು ಗೋಮಾಂಸ ತಿನ್ನುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಜೈನುಲ್ ಅಬೆದಿನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT