ದಯಾಶಂಕರ್ ಸಿಂಗ್ 
ದೇಶ

ಮಾಯಾ ವಿರುದ್ಧ ಅವಹೇಳನಕಾರಿ ಹೇಳಿಕೆ; ದಯಾಶಂಕರ್ ಸಿಂಗ್ ಬಂಧನ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್...

ಲಖನೌ: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ಅವರನ್ನು ಉತ್ತರ ಪ್ರದೇಶ ಮತ್ತು ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಿಹಾರದ ಬಕ್ಸಾರ್​ನಲ್ಲಿ ಶುಕ್ರವಾರ ಬಂಧಿಸಿದ್ದಾರೆ.
ಮಾಯಾವತಿ ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದಿದ್ದ ದಯಾಶಂಕರ್ ಸಿಂಗ್ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ದಯಾಶಂಕರ್ ಸಿಂಗ್ ಅವರನ್ನು ಇಂದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾಯಾವತಿ ಅವರು ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಟೀಕಿಸಿದ್ದರು. ಇದಕ್ಕೆ ಸ್ವಪಕ್ಷ ಬಿಜೆಪಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಬಿಎಸ್​ಪಿ ಕಾರ್ಯಕರ್ತರು ದಲಿತ ಮಹಿಳೆಗೆ ಅವಮಾನ ಮಾಡಿದ್ದಾರೆಂದು ಎಫ್​ಐಆರ್ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ದಯಾಶಂಕರ್ ಕುಟುಂಬ ಸದಸ್ಯರು ಮಾಯಾವತಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT