ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ದೇಶ

ಗುರ್ದೀಪ್ ಸಿಂಗ್ ನನ್ನು ಇಂಡೋನೇಷಿಯಾದಲ್ಲಿ ಮರಣದಂಡನೆಗೆ ಗುರಿಪಡಿಸಿಲ್ಲ: ಸುಷ್ಮಾ ಸ್ವರಾಜ್

ಮಾದಕ ವಸ್ತು ಕೇಸಿಗೆ ಸಂಬಂಧಪಟ್ಟಂತೆ ನಿನ್ನೆ ಇಂಡೋನೇಷಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಬೇಕಾಗಿದ್ದ ಭಾರತೀಯ...

ನವದೆಹಲಿ: ಮಾದಕ ವಸ್ತು ಕೇಸಿಗೆ ಸಂಬಂಧಪಟ್ಟಂತೆ ನಿನ್ನೆ ಇಂಡೋನೇಷಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಬೇಕಾಗಿದ್ದ ಭಾರತೀಯ ಪ್ರಜೆ ಗುರ್ದೀಪ್ ಸಿಂಗ್ ನನ್ನು ನೇಣಿಗೇರಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಇಂಡೋನೇಷಿಯಾದಲ್ಲಿರುವ ಭಾರತೀಯ ರಾಯಭಾರಿ ಕಳೆದ ರಾತ್ರಿ ಗುರ್ದೀಪ್ ಸಿಂಗ್ ಗೆ ಮರಣದಂಡನೆ ಶಿಕ್ಷೆ ನೀಡಿಲ್ಲ ಎಂದು ನನಗೆ ತಿಳಿಸಿದ್ದಾರೆ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಬಂದೂಕು ಪಡೆಯಿಂದ ಇತರ ನಾಲ್ವರನ್ನು ನೇಣಿಗೇರಿಸಿದ್ದು, ಭಾರತೀಯನಿಗೆ ಏಕೆ ವಿನಾಯ್ತಿ ನೀಡಲಾಯಿತು ಎಂದು ಸ್ಪಷ್ಟವಾಗಿ ತಿಳಿದಿಲ್ಲ. 
300 ಗ್ರಾಂ ಹೆರಾಯಿನ್ ನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆಪಾದನೆಗೆ ಸಂಬಂಧಿಸಿ ಇಂಡೋನೇಷಿಯಾ ನ್ಯಾಯಾಲಯದಲ್ಲಿ 2005ರಲ್ಲಿ ಗುರ್ದೀಪ್ ಸಿಂಗ್ ಗೆ ಮರಣದಂಡನೆ ಶಿಕ್ಷೆ ನೀಡಲಾಗಿತ್ತು. ಆತನನ್ನು ಶಿಕ್ಷೆಯಿಂದ ಬಚಾವು ಮಾಡಲು ಭಾರತ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಿತ್ತು. 
ಪಂಜಾಬ್ ರಾಜ್ಯದ ಜಲಂದರ್ ನ 48 ವರ್ಷದ ಗುರ್ದೀಪ್ ಸಿಂಗ್ ಇತರ 13 ಮಂದಿಯೊಂದಿಗೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ. ಈಗ ಆತ ಇಂಡೋನೇಷಿಯಾದ ನುಸಕಂಬಂಗನ್ ಪಸಿರ್ ಪುತ್ಹಿಯ ಜೈಲಿನಲ್ಲಿದ್ದಾನೆ. 13 ಮಂದಿ ಇಂಡೋನೇಷಿಯಾ, ನೈಜೀರಿಯಾ, ಜಿಂಬಾಬ್ವೆ ಮತ್ತು ಪಾಕಿಸ್ತಾನದ ಪ್ರಜೆಗಳಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT