ರಾಜನಾಥ್ ಸಿಂಗ್ 
ದೇಶ

ಆಗಸ್ಟ್ ನಲ್ಲಿ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಭೇಟಿ: ಒಳನುಸುಳುವಿಕೆ, ಭಯೋತ್ಪಾದನೆ ಬಗ್ಗೆ ಚರ್ಚೆ ಸಾಧ್ಯತೆ

ಸಾರ್ಕ್ ರಾಷ್ಟ್ರಗಳ ಗೃಹ ಸಚಿವರುಗಳ ಸಮ್ಮೇಳನದಲ್ಲಿ ಭಾಗವಹಿಸಲು ಮುಂದಿನ ತಿಂಗಳು ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದು,

ನವದೆಹಲಿ: ಸಾರ್ಕ್ ರಾಷ್ಟ್ರಗಳ ಗೃಹ ಸಚಿವರುಗಳ ಸಮ್ಮೇಳನದಲ್ಲಿ ಭಾಗವಹಿಸಲು ಮುಂದಿನ ತಿಂಗಳು ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದು, ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ನಡೆಯುತ್ತಿರುವ ಒಳನುಸುಳುವಿಕೆ, ಭಯೋತ್ಪಾದನೆ ವಿಷಯಗಳನ್ನು ಚರ್ಚಿಸಲಿದ್ದಾರೆ.

ಈ ಎರಡು ವಿಷಯಗಳನ್ನು ಪ್ರಸ್ತಾಪಿಸುವುದರೊಂದಿಗೆ, ಪಾಕಿಸ್ತಾನದ ನೆಲದಿಂದಲೇ ಭಾರತದ ಮೇಲಿನ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆ ಎಂಬ ವಾಸ್ತವಾಂಶವನ್ನು ಪಾಕಿಸ್ತಾನಕ್ಕೆ ಮನವರಿಕೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಇದೆ. ಇಸ್ಲಾಮಾಬಾದ್ ನಲ್ಲಿ ಎರಡು ದಿನಗಳು ಇರಲಿರುವ ರಾಜನಾಥ್ ಸಿಂಗ್, ಜಮ್ಮು-ಕಾಶ್ಮೀರ ಹಾಗೂ ದೇಶದ ಇತರ ಭಾಗಗಳಲ್ಲಿ ನಡೆಯುತ್ತರಿಯುವ ಭಯೋತ್ಪಾದನೆ ಕುರಿತು ದಾಖಲೆಗಳನ್ನು ನೀಡಲಿದ್ದು ಪಾಕಿಸ್ತಾನ ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯನ್ನು ತಡೆಗಟ್ಟಲು ಭಯೋತ್ಪಾದನಾ ಸಂಘಟನೆಗಳ ನಿರ್ಮೂಲನೆಗೆ ಒತ್ತಾಯಿಸಲಿದ್ದಾರೆ ಎಂದೂ ವಿಶ್ಲೇಷಿಸಲಾಗುತ್ತಿದೆ. ಇನ್ನು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಹೋಗುತ್ತಿದ್ದಾರೆ, ಆದರೆ ಅಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳಿಲ್ಲ ಎಂದು ವಿಕಾಸ್ ಸ್ವರೂಪ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!