ಶೀಲಾ ದಿಕ್ಷಿತ್ 
ದೇಶ

ಉ.ಪ್ರದೇಶ ಚುನಾವಣೆ ಗೆಲ್ಲಲು ಶೀಲಾ ದಿಕ್ಷಿತ್ ಗೆ ತುಂಬಾ ವಯಸ್ಸಾಯ್ತು: ಬಿಜೆಪಿ

ಕಾಂಗ್ರೆಸ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗಾಗಿ ಶೀಲಾ ದಿಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವುದು ತಪ್ಪು ಬೆಳವಣಿಗೆ...

ಲಖನೌ: ಕಾಂಗ್ರೆಸ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗಾಗಿ ಶೀಲಾ ದಿಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವುದು ತಪ್ಪು ಬೆಳವಣಿಗೆ. ಅವರಿಗೆ ತುಂಬಾ ವಯಸ್ಸಾಗಿದ್ದು, ಗೆಲುವು ಸಾಧಿಸುವುದು ಕಷ್ಟ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಶುಕ್ರವಾರ ಹೇಳಿದೆ. ಅಲ್ಲದೆ ಅವರ ಬದಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು ಎಂದು ವ್ಯಂಗ್ಯವಾಡಿದೆ.
ಶೀಲಾ ದಿಕ್ಷಿತ್ ಅವರು ತುಂಬಾ ಹಿರಿಯ ವ್ಯಕ್ತಿ. ಹೀಗಾಗಿ ಸ್ವತಃ ರಾಹುಲ್ ಗಾಂಧಿ ಅವರೇ ಮುಂದೆ ಬಂದು ಸಿಎಂ ಅಭ್ಯರ್ಥಿಯಾಗಬೇಕು. ಅವರು ಯಾವತ್ತೂ ಪ್ರಧಾನಿಯಾಗಲು ಸಾಧ್ಯವಿಲ್ಲ. ಹಾಗಾಗಿ ಕನಿಷ್ಠ ಮುಖ್ಯಮಂತ್ರಿಯಾದರೂ ಆಗಲಿ ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಹೇಳಿದ್ದಾರೆ.
ಒಂದು ವೇಳೆ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಚುನಾವಣೆ ಎದುರಿಸಲು ಬಯಸಿದ್ದೇಯಾದರೆ ಮತ್ತು ಕಾಂಗ್ರೆಸ್ ಗೆದ್ದೆ ಗೆಲ್ಲುತ್ತೆ ಎಂದು ಭಾವಿಸಿದ್ದರೆ ಅವರೇ ಸಿಎಂ ಅಭ್ಯರ್ಥಿಯಾಗುವುದು ಉತ್ತಮ ಎಂದು ಮೌರ್ಯ ಅವರು ಹೇಳಿದ್ದಾರೆ.
ಕಳೆದ 60 ವರ್ಷಗಳಲ್ಲಿ ಅವರ ಕುಟುಂಬ ದೇಶಕ್ಕಾಗಿ ಏನು ಮಾಡಿದೆ ಎಂಬುದು ಎಲ್ಲರಿಗೂ ಗೊತ್ತು. ಈಗ ಪುನಾಃ ಅದೇ ಪರಿಸ್ಥಿತಿಯನ್ನು ಉತ್ತರ ಪ್ರದೇಶದಲ್ಲಿ ನೋಡಲು ನಾನು ಬಯಸುವುದಿಲ್ಲ ಎಂದು ಬಿಜೆಪಿ ನಾಯಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT