ಶೀಲಾ ದಿಕ್ಷಿತ್ 
ದೇಶ

ಉ.ಪ್ರದೇಶ ಚುನಾವಣೆ ಗೆಲ್ಲಲು ಶೀಲಾ ದಿಕ್ಷಿತ್ ಗೆ ತುಂಬಾ ವಯಸ್ಸಾಯ್ತು: ಬಿಜೆಪಿ

ಕಾಂಗ್ರೆಸ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗಾಗಿ ಶೀಲಾ ದಿಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವುದು ತಪ್ಪು ಬೆಳವಣಿಗೆ...

ಲಖನೌ: ಕಾಂಗ್ರೆಸ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗಾಗಿ ಶೀಲಾ ದಿಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವುದು ತಪ್ಪು ಬೆಳವಣಿಗೆ. ಅವರಿಗೆ ತುಂಬಾ ವಯಸ್ಸಾಗಿದ್ದು, ಗೆಲುವು ಸಾಧಿಸುವುದು ಕಷ್ಟ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಶುಕ್ರವಾರ ಹೇಳಿದೆ. ಅಲ್ಲದೆ ಅವರ ಬದಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು ಎಂದು ವ್ಯಂಗ್ಯವಾಡಿದೆ.
ಶೀಲಾ ದಿಕ್ಷಿತ್ ಅವರು ತುಂಬಾ ಹಿರಿಯ ವ್ಯಕ್ತಿ. ಹೀಗಾಗಿ ಸ್ವತಃ ರಾಹುಲ್ ಗಾಂಧಿ ಅವರೇ ಮುಂದೆ ಬಂದು ಸಿಎಂ ಅಭ್ಯರ್ಥಿಯಾಗಬೇಕು. ಅವರು ಯಾವತ್ತೂ ಪ್ರಧಾನಿಯಾಗಲು ಸಾಧ್ಯವಿಲ್ಲ. ಹಾಗಾಗಿ ಕನಿಷ್ಠ ಮುಖ್ಯಮಂತ್ರಿಯಾದರೂ ಆಗಲಿ ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಹೇಳಿದ್ದಾರೆ.
ಒಂದು ವೇಳೆ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಚುನಾವಣೆ ಎದುರಿಸಲು ಬಯಸಿದ್ದೇಯಾದರೆ ಮತ್ತು ಕಾಂಗ್ರೆಸ್ ಗೆದ್ದೆ ಗೆಲ್ಲುತ್ತೆ ಎಂದು ಭಾವಿಸಿದ್ದರೆ ಅವರೇ ಸಿಎಂ ಅಭ್ಯರ್ಥಿಯಾಗುವುದು ಉತ್ತಮ ಎಂದು ಮೌರ್ಯ ಅವರು ಹೇಳಿದ್ದಾರೆ.
ಕಳೆದ 60 ವರ್ಷಗಳಲ್ಲಿ ಅವರ ಕುಟುಂಬ ದೇಶಕ್ಕಾಗಿ ಏನು ಮಾಡಿದೆ ಎಂಬುದು ಎಲ್ಲರಿಗೂ ಗೊತ್ತು. ಈಗ ಪುನಾಃ ಅದೇ ಪರಿಸ್ಥಿತಿಯನ್ನು ಉತ್ತರ ಪ್ರದೇಶದಲ್ಲಿ ನೋಡಲು ನಾನು ಬಯಸುವುದಿಲ್ಲ ಎಂದು ಬಿಜೆಪಿ ನಾಯಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT