ಅರವಿಂದ್ ಕೇಜ್ರಿವಾಲ್ ಮತ್ತು ಶರದ್ ಚೌಹಾಣ್ 
ದೇಶ

ಅರವಿಂದ್ ಕೇಜ್ರಿವಾಲ್ ಮತ್ತೊಂದು ಆಘಾತ : ಆಪ್ ಶಾಸಕ ಶರದ್ ಚೌಹಾಣ್ ಬಂಧನ

ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ...

ನವದೆಹಲಿ: ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಕಳೆದ ಬುಧವಾರ ಆಪ್ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು.

ಪಕ್ಷದಲ್ಲಿನ ಕಿರುಕುಳ ಕಾರಣ ಹೇಳಿಕೊಂಡು ಪಕ್ಷದ ಮಹಿಳಾ ಕಾರ್ಯಕರ್ತೆ ಸೋನಿ ಜುಲೈ 19ರಂದು ಇಲ್ಲಿನ ನರೇಲಾ ಎನ್ನುವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯ ಶಾಸಕರ ಕಿರಿಕಿರಿಯಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು ಸೋನಿ ಪೋಷಕರು ಆರೋಪಿಸಿ ದೂರು ನೀಡಿದ್ದರು.

ಪೊಲೀಸರು ನೀಡಿರುವ ಮಾಹಿತಿಯಂತೆ, ಸೋನಿ ಆತ್ಮಹತ್ಯೆಗೂ ಮುನ್ನ ವಾಟ್ಸ್​ಆಪ್​ನಲ್ಲಿ ದಾಖಲಿಸಿದ ವಿಡಿಯೋ ಕ್ಲಿಪ್​ನಲ್ಲಿ ಭಾರದ್ವಾಜ್, ಅಮಿತ್ ಕುಮಾರ್ ಮತ್ತು ರಜನಿಕಾಂತ್ ಅವರು ತಾನು ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಬೆದರಿಸಿದ್ದರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಜೂನ್ 2ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT