ಮಾಯಾವತಿ 
ದೇಶ

ಉ.ಪ್ರದೇಶ ಸಂಪೂರ್ಣ ಜಂಗಲ್ ರಾಜ್: ಬುಲಂದಶೇರ್ ರೇಪ್ ನಂತರ ಮಾಯಾ

ಬುಲಂದಶೇರ್ ನಲ್ಲಿ ತಾಯಿ ಮತ್ತು ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ...

ಲಖನೌ: ಬುಲಂದಶೇರ್ ನಲ್ಲಿ ತಾಯಿ ಮತ್ತು ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಭಾನುವಾರ ಆಗ್ರಹಿಸಿದ್ದಾರೆ.
ಅತ್ಯಾಚಾರ ಪ್ರಕರಣದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿರುವುದರಿಂದ ರಾಜ್ಯದಲ್ಲಿ ಇಂತಹ ಹೀನ ಕೃತ್ಯಗಳು ನಡೆಯುತ್ತಿವೆ. ಉತ್ತರ ಪ್ರದೇಶ ಈಗ ಸಂಪೂರ್ಣ ಜಂಗಲ್ ರಾಜ್ ಆಗಿದೆ ಎಂದು ಆರೋಪಿಸಿದ್ದಾರೆ.
ಜನರಿಗೆ ರಕ್ಷಣೆ ನೀಡುವಲ್ಲಿ ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಮಾಜವಾದಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂಬುದು ಇಂತಹ ಘಟನೆಗಳಿಂದ ಸ್ಪಷ್ಟವಾಗುತ್ತದೆ ಎಂದು ಅಖಿಲೇಶ್ ಯಾದವ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕಾಂಗ್ರೆಸ್ ಸಹ ತಾಯಿ, ಮಗಳ ಮೇಲಿನ ಅತ್ಯಾಚಾರವನ್ನು ಖಂಡಿಸಿದ್ದು, ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ವಕ್ತಾರ ಡಿ.ಪಿ.ಸಿಂಗ್ ಅವರು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 9ರ ಮೂಲಕವಾಗಿ ತಮ್ಮ ಸ್ವಗ್ರಾಮಕ್ಕೆ ಮರಳುತ್ತಿದ್ದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಎಳೆದೊಯ್ದ ದರೋಡೆಕೋರರು 3 ಗಂಟೆಗಳ ಕಾಲ ಅತ್ಯಾಚಾರ ನಡೆಸಿ, ಅವರ ಬಳಿಯಿದ್ದ ಚಿನ್ನಾಬರಣ ಹಾಗೂ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಬುಲಂದಶಹರ್ ಗ್ರಾಮದಲ್ಲಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!