ಗುರುಗಾಂವ್ ನಲ್ಲಿ ಟ್ರಾಫಿಕ್ ಜಾಮ್ (ಸಂಗ್ರಹ ಚಿತ್ರ) 
ದೇಶ

ಪೊಲಿಸ್ ಆಯುಕ್ತರ ವರ್ಗಾವಣೆ ವರದಿ ತಳ್ಳಿಹಾಕಿದ ಹರ್ಯಾಣ ಸರ್ಕಾರ

ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿರುವ ವರದಿಗಳನ್ನು ಹರ್ಯಾಣ ಸರ್ಕಾರ ತಳ್ಳಿಹಾಕಿದೆ.

ಗುರಗಾಂವ್: ಮಳೆಯಿಂದಾಗಿ ರಾಜಧಾನಿ ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿ ಸಂಭವಿಸಿದ ಟ್ರಾಫಿಕ್ ಜಾಮ್ ಪ್ರಕರಣದಲ್ಲಿ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿರುವ ವರದಿಗಳನ್ನು ಹರ್ಯಾಣ ಸರ್ಕಾರ ತಳ್ಳಿಹಾಕಿದೆ.

ಆಯುಕ್ತ ನವದೀಪ್ ವಿರ್ಕ್ ರನ್ನು ವರ್ಗಾವಣೆ ಮಾಡಲಾಗಿಲ್ಲ, ಗುರಗಾಂವ್ ಆಯುಕ್ತರಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲಿಸ್ ಇಲಾಖೆಯ ಡಿಜಿಪಿ ಕೆಪಿ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಗುರಗಾಂವ್-ದೆಹಲಿ-ಜೈಪುರ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದ್ದ ಭಾರಿ ಟ್ರಾಫಿಕ್ ಜಾಮ್ ನಿರ್ವಹಣೆಯಲ್ಲಿ ಗುರಗಾಂವ್ ಪೊಲೀಸರು ವಿಫಲವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಆಯುಕ್ತ  ಸಿಪಿ ನವದೀಪ್ ವಿರ್ಕ್ ರನ್ನು ರೋಹ್ಟಕ್ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಗುರಗಾಂವ್ ನ ನೂತನ ಆಯುಕ್ತರನ್ನಾಗಿ ಸಂದೀಪ್ ಖಿರವಾರ್ ಅವರನ್ನು ನೇಮಿಸಲಾಗಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಗುರಗಾಂವ್ ನ ಡಿಪಿಆರ್ ಒ ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಪೊಲಿಸ್ ಆಯುಕ್ತರನ್ನು ವರ್ಗಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಗುರಗಾಂವ್ ನಲ್ಲಿ ಗುರುವಾರದಿಂದ ಸತತ ಮೂರು ದಿನ ಸುರಿದ ಭಾರಿ ಮಳೆಯಿಂದಾಗಿ ಗುರುಗ್ರಾಮದಲ್ಲಿ 15 -20ಕಿ.ಮೀ. ಉದ್ದದ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು,  ನೌಕರರು, ಪ್ರಮುಖವಾಗಿ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಟ್ರಾಫಿಕ್ ಜಾಮ್ ಹಾಗೂ ಗುರಗಾಂವ್ ಪೊಲೀಸರ ಲೋಪದಿಂದ ಕೂಡಿದ ನಿರ್ವಹಣೆ ಸಾಮಾಜಿಕ  ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT