ಕಾಶ್ಮೀರ ಗಲಭೆ (ಸಂಗ್ರಹ ಚಿತ್ರ) 
ದೇಶ

ಉಗ್ರ ಬುಹ್ರಾನ್ ವನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಗಲಭೆ: ಸಾವಿನ ಸಂಖ್ಯೆ 49ಕ್ಕೇರಿಕೆ

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಉಂಟಾಗಿದ್ದ ವ್ಯಾಪಕ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಗಲಭೆಯಲ್ಲಿ ಗಾಯಗೊಂಡ ಓರ್ವ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಗರದಲ್ಲಿ ಸಾವನ್ನಪ್ಪಿದ್ದಾನೆ.

ಶ್ರೀನಗರ: ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಉಂಟಾಗಿದ್ದ ವ್ಯಾಪಕ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಗಲಭೆಯಲ್ಲಿ  ಗಾಯಗೊಂಡ ಓರ್ವ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಗರದಲ್ಲಿ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು 17 ವರ್ಷದ ಇಶ್ಫಾಕ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಜುಲೈ 23ರಂದು ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಯೋಧರೊಂದಿಗೆ ನಡೆದ ಘರ್ಷಣೆಯಲ್ಲಿ  ಈತ ಗಂಭೀರವಾಗಿ ಗಾಯಗೊಂಡಿದ್ದ. ಯೋಧರ ವಿರುದ್ಧ ಕಲ್ಲು ತೂರಾಟ ಮಾಡಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಮಲಗಿದ್ದ ಈತನನ್ನು ಯೋಧರೇ ಸ್ಕಿಮ್ಸ್ ಆಸ್ಪತ್ರೆಗೆ ಸಾಗಿಸಿ  ಚಿಕಿತ್ಸೆ ಕೊಡಿಸಿದ್ದರು. ಸತತ 7 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಈತ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಶ್ಫಾಕ್ ಅಹ್ಮದ್ ದಾರ್ ಸಾವಿನೊಂದಿಗೆ ಆ ಮೂಲಕ ಕಾಶ್ಮೀರ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಇನ್ನು ಕಾಶ್ಮೀರ ಗಲಭೆ ಹಿನ್ನಲೆಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಪ್ರಸ್ತುತ ಬಹುತೇಕ ನಗರಗಳಲ್ಲಿ ಹಿಂಪಡೆಯಲಾಗಿದೆಯಾದರೂ, ಅನಂತ್ ನಾಗ್, ಪುಲ್ವಾಮ, ಬಾರಾಮುಲ್ಲಾ ಜಿಲ್ಲೆಗಳ ಕೆಲ  ಸೂಕ್ಷ್ಮ ಪ್ರದೇಶಗಳಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಈ ಪ್ರದೇಶಗಲ್ಲಿ ಯಾವುದೇ ಕ್ಷಣದಲ್ಲಿ ಹಿಂಸಾಚಾರ ಭುಗಿಲೇಳಬಹುದು ಎಂಬ ಕಾರಣದಿಂದಾಗಿ ಇಲ್ಲಿ ಕರ್ಫ್ಯೂ  ಮುಂದುವರೆಸಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel