ಕಾಶ್ಮೀರ ಗಲಭೆ (ಸಂಗ್ರಹ ಚಿತ್ರ) 
ದೇಶ

ಉಗ್ರ ಬುಹ್ರಾನ್ ವನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಗಲಭೆ: ಸಾವಿನ ಸಂಖ್ಯೆ 49ಕ್ಕೇರಿಕೆ

ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಉಂಟಾಗಿದ್ದ ವ್ಯಾಪಕ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಗಲಭೆಯಲ್ಲಿ ಗಾಯಗೊಂಡ ಓರ್ವ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಗರದಲ್ಲಿ ಸಾವನ್ನಪ್ಪಿದ್ದಾನೆ.

ಶ್ರೀನಗರ: ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಉಂಟಾಗಿದ್ದ ವ್ಯಾಪಕ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಗಲಭೆಯಲ್ಲಿ  ಗಾಯಗೊಂಡ ಓರ್ವ ಗಾಯಾಳು ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಗರದಲ್ಲಿ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು 17 ವರ್ಷದ ಇಶ್ಫಾಕ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಜುಲೈ 23ರಂದು ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಯೋಧರೊಂದಿಗೆ ನಡೆದ ಘರ್ಷಣೆಯಲ್ಲಿ  ಈತ ಗಂಭೀರವಾಗಿ ಗಾಯಗೊಂಡಿದ್ದ. ಯೋಧರ ವಿರುದ್ಧ ಕಲ್ಲು ತೂರಾಟ ಮಾಡಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಮಲಗಿದ್ದ ಈತನನ್ನು ಯೋಧರೇ ಸ್ಕಿಮ್ಸ್ ಆಸ್ಪತ್ರೆಗೆ ಸಾಗಿಸಿ  ಚಿಕಿತ್ಸೆ ಕೊಡಿಸಿದ್ದರು. ಸತತ 7 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಈತ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಶ್ಫಾಕ್ ಅಹ್ಮದ್ ದಾರ್ ಸಾವಿನೊಂದಿಗೆ ಆ ಮೂಲಕ ಕಾಶ್ಮೀರ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಇನ್ನು ಕಾಶ್ಮೀರ ಗಲಭೆ ಹಿನ್ನಲೆಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಪ್ರಸ್ತುತ ಬಹುತೇಕ ನಗರಗಳಲ್ಲಿ ಹಿಂಪಡೆಯಲಾಗಿದೆಯಾದರೂ, ಅನಂತ್ ನಾಗ್, ಪುಲ್ವಾಮ, ಬಾರಾಮುಲ್ಲಾ ಜಿಲ್ಲೆಗಳ ಕೆಲ  ಸೂಕ್ಷ್ಮ ಪ್ರದೇಶಗಳಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಾಗಿ ಈ ಪ್ರದೇಶಗಲ್ಲಿ ಯಾವುದೇ ಕ್ಷಣದಲ್ಲಿ ಹಿಂಸಾಚಾರ ಭುಗಿಲೇಳಬಹುದು ಎಂಬ ಕಾರಣದಿಂದಾಗಿ ಇಲ್ಲಿ ಕರ್ಫ್ಯೂ  ಮುಂದುವರೆಸಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT