ದೇಶ

ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಹತ್ಯೆ ಮಾಡಿದ ಬಿಎಸ್ ಎಫ್ ಯೋಧರು

Srinivas Rao BV

ಚಂಡೀಗಢ: ಪಂಜಾಬ್ ನ ಫಿರೋಜ್ ಪುರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್ ಎಫ್ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಭಾನುವಾರ ಸಂಜೆ ಪಾಕಿಸ್ತಾನದಿಂದ ಭಾರತದೊಳಗೆ ನುಸುಳಲು ಓರ್ವ ವ್ಯಕ್ತಿ ಯತ್ನಿಸಿದ್ದು, ಬಾರ್ಡರ್ ಔಟ್ ಪೋಸ್ಟ್ ನ ಸಿಬ್ಬಂದಿಗಳು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಪಾಕಿಸ್ತಾನಿ ಮೂಲದ ವ್ಯಕ್ತಿಯ ಮೃತದೇಹವನ್ನು ಪಂಜಾಬ್ ಪೋಲೀಸರ ವಶಕ್ಕೆ ನೀಡಲಾಗಿದೆ.

ಗಡಿ ಪ್ರದೇಶದ ಬೇಲಿಯಲ್ಲಿ, ಐವರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದದ್ದನ್ನು ಬಿಎಸ್ ಎಫ್ ಯೋಧರು ಗಮನಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳು ಬಿಎಸ್ ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಯೋಧರ ಪ್ರತಿದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಉಳಿದ 4 ಜನರು ಪರಾರಿಯಾಗಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆಯೇ 553 ಕಿಮಿ ದೂರವಿರುವ ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ವರ್ಷದ ಜುಲೈ ನಲ್ಲಿ ಗುರ್ದಾಸ್ ಪುರದಲ್ಲಿ ಪಾಕಿಸ್ತಾನದಿಂದ ಭಾರತಒಳಗೆ ನುಸುಳಿದ್ದ ಭಯೋತ್ಪಾದಕರು ದಾಳಿ ನಡೆಸಿದ್ದರು.

SCROLL FOR NEXT