ಆನಂದಿಬೆನ್ ಪಟೇಲ್ 
ದೇಶ

ಗುಜರಾತ್ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲು ಆನಂದಿ ಬೆನ್ ಇಂಗಿತ

ಗುಜರಾತ್ ನ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಭಾಜನಾರಾಗಿದ್ದ ಆನಂದಿಬೆನ್ ಪಟೇಲ್ ಅವರು ಇದೀಗ ಅವಧಿಗೂ ಮುನ್ನವೇ ಸಿಎಂ...

ಗಾಂಧಿನಗರ: ಗುಜರಾತ್ ನ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆನಂದಿಬೆನ್ ಪಟೇಲ್ ಅವರು ಇದೀಗ ಅವಧಿಗೂ ಮುನ್ನವೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಆನಂದಿಬೆನ್ ಪಟೇಲ್ ಅವರು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿ ತಮ್ಮ ಫೇಸ್ ಬುಕ್ ಮೂಲಕ ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡಿಕೊಂಡಿದ್ದಾರೆ. ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಹೊಸ ನಾಯಕತ್ವ ವಹಿಸಿಕೊಳ್ಳುವವರಿಗೆ ಹೆಚ್ಚಿನ ಸಮಯಾವಕಾಶ ಸಿಗಲಿದೆ ಎಂದು ಆನಂದಿಬೆನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಟೇಲ್ ಮೀಸಲಾತಿ ಚಳವಳಿ, ದಲಿತ ದೌರ್ಜನ್ಯ ಪ್ರಕರಣಗಳಿಂದಾಗಿ ಗುಜರಾತ್ ನಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿದೆ. 2017ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಬಿಜೆಪಿಗೆ ತೀವ್ರ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಚುನಾವಣೆ ದೃಷ್ಠಿಯಿಂದಾಗಿ ನಾಯಕತ್ವದ ಬದಲಾವಣೆ ಅವಶ್ಯಕತೆ ಎದುರಾಗಿದೆ. ಒಂದೆಡೆ ವೃದ್ಧಾಪ್ಯ ಹಾಗೂ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿರುವುದರಿಂದ ಆನಂದಿಬೆನ್ ರಾಜಿನಾಮೆಗೆ ಇಂಗಿತ ವ್ಯಕ್ತಪಡಿಸಲು ಕಾರಣವಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲು ಆನಂದಿಬೆನ್ ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ 2017ರ ಚುನಾವಣೆಗೂ ಮುನ್ನ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರಾಗಿರುವ ಗುಜರಾತ್ ನಲ್ಲಿ ಸದ್ಯ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಇದನ್ನು ಮೆಟ್ಟಿ ನಿಲ್ಲುವಂತ ನಾಯಕನ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸಬೇಕಿದೆ. ಗುಜರಾತ್ ಚುನಾವಣೆ ಮುಂದಿನ ಲೋಕಸಭೆ ಚುನಾವಣೆ ಮೇಲೂ ಪ್ರಭಾವ ಬೀರುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT