ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಸೌದಿಯಲ್ಲಿರುವ 10 ಸಾವಿರ ಭಾರತೀಯ ನೌಕರರನ್ನು ವಾಪಸ್ ಕರೆಸಿಕೊಳ್ಳಲಾಗುವುದು: ಸುಷ್ಮಾ ಸ್ವರಾಜ್

ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ವಾಪಸ್ಸು ಭಾರತಕ್ಕೆ ...

ನವದೆಹಲಿ: ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ವಾಪಸ್ಸು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತಿದ್ದು, ಅವರಿಗೆ ಶಿಬಿರಗಳ ಮೂಲಕ ಆಹಾರ ಒದಗಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲು ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಸೌದಿ ಅರೇಬಿಯಾಕ್ಕೆ ನಾಳೆ ಭೇಟಿ ನೀಡಲಿದ್ದಾರೆ ಎಂದರು.
ಸೌದಿ ಅರೇಬಿಯಾದಲ್ಲಿ ಕೆಲಸ ಕಳೆದುಕೊಂಡ ಪ್ರತಿಯೊಬ್ಬ ಭಾರತೀಯರಿಗೂ ಆಹಾರ ಒದಗಿಸಲಾಗುವುದು. ಗಂಟೆಗೊಮ್ಮೆ ಅಲ್ಲಿನ ಪರಿಸ್ಥಿತಿಯನ್ನು ನಿಗಾ ವಹಿಸುತ್ತಿದ್ದೇನೆ. ಮುಂದಿನ 10 ದಿನಗಳಲ್ಲಿ ಎಲ್ಲಾ 5 ಶಿಬಿರಗಳಿಗೆ ಆಹಾರದ ಪೊಟ್ಟಣ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
''ಆದರೆ ಇದು ಶಾಶ್ವತ ಪರಿಹಾರವಲ್ಲ. ಕಂಪೆನಿಗಳು ಕಾರ್ಖಾನೆಗಳಿಗೆ ಬೀಗ ಹಾಕಿ ಹೋಗಿವೆ. ನಮ್ಮ ದೇಶದ ಕಾರ್ಮಿಕರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ನಾನು ವಿದೇಶಾಂಗ ಕಚೇರಿ ಮತ್ತು ಕಾರ್ಮಿಕ ಕಚೇರಿಯನ್ನು ಸಂಪರ್ಕಿಸಿದ್ದೇವೆ. ಅಲ್ಲಿನ ಭಾರತೀಯರನ್ನು ಕರೆತರಲು ವಿದೇಶಾಂಗ ಕಚೇರಿಯ ನೆರವು ಕೋರಿದ್ದೇವೆ ಎಂದರು.
ಪರಿಸ್ಥಿತಿಯನ್ನು ವಿವರಿಸಿದ ಅವರು, ಕಂಪೆನಿಗಳು ಸರ್ಕಾರಕ್ಕೆ ಕಟ್ಟಬೇಕಾದ ಹಣ ಬಾಕಿಯಿದೆ. ಗುತ್ತಿಗೆಗೆ ಸಹಿ ಹಾಕುವಂತೆ ನಾನು ಕಾರ್ಮಿಕ ಇಲಾಖೆಯನ್ನು ಕೋರಿದ್ದೇನೆ. ಕಂಪೆನಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಕಟ್ಟುವ ಮೊದಲು, ಈ ನೌಕರರಿಗೆ ವೇತನ ನೀಡಲಿ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ. 
ವಿ.ಕೆ.ಸಿಂಗ್ ಅವರು ರಿಯಾದ್ ತಲುಪಿದ ನಂತರ ಎಲ್ಲಾ ಔಪಚಾರಿಕ ಕ್ರಮ ಮುಗಿಯಲಿದೆ ಎಂದರು.ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಸೌದಿಯ ನಿರ್ಮಾಣ ಕೈಗಾರಿಕೆಗಳ ವ್ಯಾಪಾರ, ವಹಿವಾಟಿನಲ್ಲಿ ಕುಂಠಿತವಾಗಿದ್ದು, ಸೌದಿಯ ಪ್ರಮುಖ ನಿರ್ಮಾಣ ಕಂಪೆನಿಯಾದ ಸೌದಿ ಒಗರ್ ನಲ್ಲಿನ ಕೆಲಸಗಾರರನ್ನು ತೆಗೆದುಹಾಕಲಾಗಿದೆ. ಇದರಿಂದ ಸಾವಿರಾರು ಮಂದಿ ಭಾರತೀಯ ನೌಕರರು ಕೂಡ ಕೆಲಸ ಕಳೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT