ಸ್ತನ್ಯಪಾನ 
ದೇಶ

ವಿಶ್ವ ಸ್ತನ್ಯಪಾನ ಸಪ್ತಾಹ: ಕರ್ನಾಟಕದಲ್ಲಿ ಎದೆ ಹಾಲಿನ ಬ್ಯಾಂಕ್ ಇಲ್ಲ!

ಆಗಸ್ಟ್ 1-8 ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಲಿದ್ದು, ಕರ್ನಾಟಕದಲ್ಲಿ ಶಿಶುಗಳ ಸಾವಿನ ಸಂಖ್ಯೆ 1,000 ಕ್ಕೆ 31 ರಷ್ಟಿದ್ದು, ಅವಧಿ ಪೂರ್ವ ಜನನವಾಗುವ ಶಿಶುಗಳು ಶೇ.23 ರಷ್ಟಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ಆಗಸ್ಟ್ 1-8 ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಲಿದ್ದು, ಕರ್ನಾಟಕದಲ್ಲಿ ಶಿಶುಗಳ ಸಾವಿನ ಸಂಖ್ಯೆ 1,000 ಕ್ಕೆ 31 ರಷ್ಟಿದ್ದು, ಅವಧಿ ಪೂರ್ವ ಜನನವಾಗುವ ಶಿಶುಗಳು ಶೇ.23 ರಷ್ಟಿವೆ ಎಂದು ತಿಳಿದುಬಂದಿದೆ.

ಇನ್ನು ನವಜಾತ ಶಿಶುಗಳಿಗೆ ಸ್ತನ್ಯಪಾನ ಅತ್ಯಗತ್ಯವಾಗಿದ್ದು, ಕರ್ನಾಟಕದಲ್ಲಿ ಎದೆ ಹಾಲಿನ ಬ್ಯಾಂಕ್ ಇಲ್ಲದಿರುವುದು ಅಚ್ಚರಿಯ ಸಂಗತಿಯಾಗಿದೆ. ಯಾವುದೇ ತಾಯಂದಿರು ಮಗುವಿಗೆ ಸಾಕಾಗುವಷ್ಟು ಹಾಲನ್ನು ಹೊಂದಿಲ್ಲದೆ ಇದ್ದರೆ ಕೆಲವು ಸಂದರ್ಭಗಳಲ್ಲಿ ಫಾರ್ಮುಲಾ ಮಿಲ್ಕ್‌ ಪೌಡರ್‌ಗಳನ್ನು ಎಳೆಯ ಮಕ್ಕಳಿಗೆ ನೀಡಲು ಸೂಚಿಸಲಾಗುತ್ತದೆ. ಸ್ತನ್ಯಪಾನ ಮಾಡಿಸುವುದರಿಂದ ಮಕ್ಕಳಿಗೆ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು ಎಂದು  ಮಣಿಪಾಲ ಮಕ್ಕಳ ಕೇಂದ್ರದ ಶಿಶುತಜ್ಞ ಡಾ.ಕಾರ್ತಿಕ್ ನಾಗೇಶ್ ಹೇಳಿದ್ದಾರೆ.

ಅವಧಿ ಪೂರ್ವ ಜನಿಸುವ ಶಿಶುಗಳ ರಕ್ಷಣೆಗೆ ಸ್ತನ್ಯಪಾನ ಸಹಕಾರಿಯಾಗಿದ್ದು, ಇಂತಹ ಸಂದರ್ಭಗಳಲ್ಲಿ ಎದೆ ಹಾಲಿನ ಬ್ಯಾಂಕ್ ನೆರವಾಗಲಿದೆ. ಆದರೆ ಕರ್ನಾಟಕದಲ್ಲಿ ಈ ವರೆಗೂ ಇಂತಹ ಸೌಲಭ್ಯ ಇಲ್ಲ ಎಂಬುದು ಅಚ್ಚರಿ ಮೂಡಿಸಿದೆ. ಎದೆ ಹಾಲಿನ ಬ್ಯಾಂಕ್ ನ್ನು ಪ್ರಾರಂಭಿಸಲು ಸುಮಾರು 1 ರಿಂದ 2 ಕೋಟಿ ವೆಚ್ಚವಾಗಲಿದೆ ಎಂದು ಶಿಶು ತಜ್ಞ ಡಾ. ಕಾರ್ತಿಕ್ ನಾಗೇಶ್ ತಿಳಿಸಿದ್ದಾರೆ. ರಾಜಸ್ತಾನ, ಪಶ್ಚಿಮ ಬಂಗಾಳ, ನೆರೆಯ ರಾಜ್ಯ ತಮಿಳುನಾಡಿನಲ್ಲೂ ಸರ್ಕಾರಿ ಅಥವಾ ಎನ್ ಜಿ ಒ ಗಳು  ನಡೆಸುತ್ತಿರುವ ಎದೆ ಹಾಲಿನ ಬ್ಯಾಂಕ್ ಗಳಿವೆ ಆದರೆ ಕರ್ನಾಟಕದಲ್ಲಿ ಮಾತ್ರ ಇನ್ನಷ್ಟೇ ಪ್ರಾರಂಭವಾಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT