ಸಾಂದರ್ಭಿಕ ಚಿತ್ರ 
ದೇಶ

ಈ ಬಾರಿ ಮಾನ್ಸೂನ್ ಕೊರತೆ ಇಲ್ಲ, ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ: ಐಎಂಡಿ

ಈ ಬಾರಿ ಮಾನ್ಸೂನ್ ಕೊರತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಹವಾಮಾನ ಇಲಾಖೆ, ಈ ವರ್ಷ ಶೇ.96ರಷ್ಟು ಸಾಧಾರಣ ಅಥವಾ ಅದಕ್ಕಿಂತ....

ನವದೆಹಲಿ: ಈ ಬಾರಿ ಮಾನ್ಸೂನ್ ಕೊರತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಹವಾಮಾನ ಇಲಾಖೆ, ಈ ವರ್ಷ ಶೇ.96ರಷ್ಟು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಗುರುವಾರ ಹೇಳಿದೆ.
ಮಾನ್ಸೂನ್ ಗೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹವಾಮಾನ ಇಲಾಖೆ ಮಹಾ ನಿರ್ದೇಶಕ ಲಕ್ಷ್ಮಣ್ ಸಿಂಗ್ ರಾಥೋಡ್ ಅವರು, ಮುಂದಿನ ನಾಲ್ಕೈದು ದಿನಗಳಲ್ಲಿ ಮಾನ್ಸೂನ್ ಕೇರಳ ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು, ಜುಲೈ ಮತ್ತು ಆಗಸ್ಟ್​ನಲ್ಲಿ ಸಾಕಷ್ಟು ಮಳೆ ಆಗುವ ಸಾಧ್ಯತೆ ಇದೆ ಎಂದರು. 
ಜುಲೈನಲ್ಲಿ ಸರಾಸರಿ 107% ರಷ್ಟು, ಆಗಸ್ಟ್​ನಲ್ಲಿ 104% ರಷ್ಟು ಮಳೆ ಆಗಲಿದೆ. ಜೂನ್ 5 ಅಥವಾ 6ರಂದು ದಕ್ಷಿಣ ಒಳನಾಡು ಪ್ರದೇಶಗಳಿಗೆ ಮುಂಗಾರು ಪ್ರವೇಶಿಸಲಿದ್ದು, ಈ ಪ್ರದೇಶದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದ್ದಾರೆ.
ದೇಶದ ವಾಯುವ್ಯ ಭಾಗದಲ್ಲಿ ಸರಾಸರಿ 108%ರಷ್ಟು, ಮಧ್ಯ ವಲಯದಲ್ಲಿ 113%ರಷ್ಟು, ದ್ವೀಪ ಪ್ರದೇಶಗಳಲ್ಲಿ 113% ರಷ್ಟು ಹಾಗೂ ಈಶಾನ್ಯ ವಲಯಗಳಲ್ಲಿ 94%ರಷ್ಟು ಮಳೆಯಾಗುವ ಸಾಧ್ಯತೆಗಳು ಇವೆ ಎಂದು ತಿಳಿಸಿರುವ ಅವರು ಮುಂಗಾರು ಕೊರತೆಯಾಗುವ ಸಾಧ್ಯತೆಗಳೇನು ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT