ದೇಶ

ಕ್ಷಿಪಣಿ ತಂತ್ರಜ್ಞಾನ ಪ್ರಸರಣ ತಡೆ ಒಪ್ಪಂದಕ್ಕೆ ಭಾರತದ ಸಹಿ

ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹಕ್ಕೆ ಸೇರ್ಪಡೆಯಾಗುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ನವದೆಹಲಿ: ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹಕ್ಕೆ ಸೇರ್ಪಡೆಯಾಗುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕ್ಷಿಪಣಿ ತಂತ್ರಜ್ಞಾನ ಪ್ರಸರಣ ತಡೆಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿಹಾಕಿದೆ.

ಕ್ಷಿಪಣಿ ತಂತ್ರಜ್ಞಾನವನ್ನು ವಿವೇಚನಾರಹಿತವಾಗಿ ಪ್ರಸರಣ ಮಾಡುವುದಕ್ಕೆ ಅಂಕುಶ ಹಾಕಲು ವಿಶ್ವ ಸಮುದಾಯ ಕೈಗೊಂಡಿರುವ ಕ್ರಮವನ್ನು ಭಾರತ ಸರ್ಕಾರ ಬೆಂಬಲಿಸಿದ್ದು ಜಾಗತಿಕ ನಿಲುವಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೂ.4 ರಿಂದ ಅಮೆರಿಕ ಸೇರಿದಂತೆ 5 ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲೇ ಕ್ಷಿಪಣಿ ತಂತ್ರಜ್ಞಾನ ಪ್ರಸರಣ ತಡೆಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದು ಪರಮಾಣು ಪೂರೈಕೆದಾರ ಸಮೂಹಕ್ಕೆ ಭಾರತ ಸೇರ್ಪಡೆಯಾಗುವ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕ್ಷಿಪಣಿ ಪ್ರಸರಣ ತಡೆಗಾಗಿ 2002 ರಲ್ಲಿ ರೂಪಿಸಲಾಗಿದ್ದ ಹೇಗ್‌ ನಿಯಮಾವಳಿಗೆ ಭಾರತ ಸಹಿ ಹಾಕಿರುವುದನ್ನು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್‌ ಸ್ವರೂಪ್‌ ಸ್ಪಷ್ಟಪಡಿಸಿದ್ದಾರೆ. ಹೇಗ್‌ ನಿಯಮಾವಳಿ ವಿಶ್ವಾಸವೃದ್ಧಿಯ ಜತೆಗೆ ಪಾರದರ್ಶಕತೆ ಮೂಡಿಸುವ ಕ್ರಮವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!