ಹೇಮಾಮಾಲಿನಿ 
ದೇಶ

ಮಥುರಾ ಘರ್ಷಣೆ: ವಿಷಾದ ವ್ಯಕ್ತಪಡಿಸಿದ ಹೇಮಾಮಾಲಿನಿ

ಮಥುರಾ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಥುರಾ ಸಂಸದೆ ಹೇಮಾಮಾಲಿನ ಟ್ವಿಟರ್ ನಲ್ಲಿ ತನ್ನ ಶೂಟಿಂಗ್ ಫೋಟೋಗಳನ್ನು...

ನವದೆಹಲಿ: ಮಥುರಾ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಥುರಾ ಸಂಸದೆ ಹೇಮಾಮಾಲಿನ ಟ್ವಿಟರ್ ನಲ್ಲಿ ತನ್ನ ಶೂಟಿಂಗ್ ಫೋಟೋಗಳನ್ನು ಅಪ್ ಲೋಡ್ ಮಾಡಿಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ನಟಿ ಹೇಮಾಮಾಲಿನಿ ಟ್ವಿಟರ್ ನಿಂದ ಅಪ್ ಲೋಡ್ ಮಾಡಲಾಗಿದ್ದ ಫೋಟೋಗಳನ್ನು ತೆಗೆದುಹಾಕಿದ್ದಾರೆ. 
ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ರಿಕ್ತ ಜನರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸೇರಿ 24 ಜನರು ಸಾವನ್ನಪ್ಪಿದ ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ತನ್ನ ಶೂಟಿಂಗ್ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ, ಬಿಜೆಪಿ ಪಕ್ಷದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡಲಾಗಿದ್ದ ಫೋಟೋಗಳನ್ನು ತೆಗೆದು ಹಾಕಿದ್ದಾರೆ.
ನಂತರ ಮಥುರಾ ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈಗಷ್ಟೇ ಮಥುರಾದಿಂದ ಆಗಮಿಸಿದ್ದೇನೆ. ಅಗತ್ಯ ಬಿದ್ದರೆ ನಾನು ಮಥುರಾಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ನನಗೆ ಈಗಷ್ಟೇ ತಿಳಿಯಿತು ಅಲ್ಲಿ ಘರ್ಷಣೆಯಿಂದಾಗಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆಂದು. ಸುದ್ದಿ ಕೇಳಿ ತುಂಬಾ ಬೇಸರವಾಗಿದೆ. ನನ್ನ ಅಗತ್ಯ ಬಿದ್ದರೆ ನಾನು ಮತ್ತೆ ಮಥುರಾಗೆ ತೆರಳುವೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ಪ್ರಕರಣವನ್ನು ವಿಷಯಾಂತರಗೊಳಿಸದೆ, ಘರ್ಷಣೆ ನಿವಾರಣೆಗೆ ಕ್ರಮ ಕೈಗೊಳ್ಳುವ ಅಗತ್ಯೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಡಿಕೆಶಿ ಸಂಪುಟದಲ್ಲಿ ಹೊಸ ತಲೆಮಾರಿಗೆ ಅವಕಾಶ; 7 ಶಾಸಕರಿಗೆ ಸಚಿವ ಸ್ಥಾನ, ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ ನಾಯಕರು ಯಾರು?