ಹೇಮಾಮಾಲಿನಿ 
ದೇಶ

ಮಥುರಾ ಘರ್ಷಣೆ: ವಿಷಾದ ವ್ಯಕ್ತಪಡಿಸಿದ ಹೇಮಾಮಾಲಿನಿ

ಮಥುರಾ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಥುರಾ ಸಂಸದೆ ಹೇಮಾಮಾಲಿನ ಟ್ವಿಟರ್ ನಲ್ಲಿ ತನ್ನ ಶೂಟಿಂಗ್ ಫೋಟೋಗಳನ್ನು...

ನವದೆಹಲಿ: ಮಥುರಾ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಥುರಾ ಸಂಸದೆ ಹೇಮಾಮಾಲಿನ ಟ್ವಿಟರ್ ನಲ್ಲಿ ತನ್ನ ಶೂಟಿಂಗ್ ಫೋಟೋಗಳನ್ನು ಅಪ್ ಲೋಡ್ ಮಾಡಿಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ನಟಿ ಹೇಮಾಮಾಲಿನಿ ಟ್ವಿಟರ್ ನಿಂದ ಅಪ್ ಲೋಡ್ ಮಾಡಲಾಗಿದ್ದ ಫೋಟೋಗಳನ್ನು ತೆಗೆದುಹಾಕಿದ್ದಾರೆ. 
ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ರಿಕ್ತ ಜನರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸೇರಿ 24 ಜನರು ಸಾವನ್ನಪ್ಪಿದ ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ತನ್ನ ಶೂಟಿಂಗ್ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ, ಬಿಜೆಪಿ ಪಕ್ಷದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡಲಾಗಿದ್ದ ಫೋಟೋಗಳನ್ನು ತೆಗೆದು ಹಾಕಿದ್ದಾರೆ.
ನಂತರ ಮಥುರಾ ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈಗಷ್ಟೇ ಮಥುರಾದಿಂದ ಆಗಮಿಸಿದ್ದೇನೆ. ಅಗತ್ಯ ಬಿದ್ದರೆ ನಾನು ಮಥುರಾಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ನನಗೆ ಈಗಷ್ಟೇ ತಿಳಿಯಿತು ಅಲ್ಲಿ ಘರ್ಷಣೆಯಿಂದಾಗಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆಂದು. ಸುದ್ದಿ ಕೇಳಿ ತುಂಬಾ ಬೇಸರವಾಗಿದೆ. ನನ್ನ ಅಗತ್ಯ ಬಿದ್ದರೆ ನಾನು ಮತ್ತೆ ಮಥುರಾಗೆ ತೆರಳುವೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ಪ್ರಕರಣವನ್ನು ವಿಷಯಾಂತರಗೊಳಿಸದೆ, ಘರ್ಷಣೆ ನಿವಾರಣೆಗೆ ಕ್ರಮ ಕೈಗೊಳ್ಳುವ ಅಗತ್ಯೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT